ಪತ್ನಿಯನ್ನು ಕೊಲೆ ಮಾಡಿದ್ದ ಪತಿ 10 ದಿನಗಳ ಬಳಿಕ ಶವವಾಗಿ ಪತ್ತೆ

ಹಾಸನ: ಪತ್ನಿಯನ್ನು(Wife) ಕೊಲೆ ಮಾಡಿದ್ದ ಪತಿ(Husband) ಹತ್ತು ದಿನಗಳ ಬಳಿಕ ಶವವಾಗಿ ಪತ್ತೆಯಾದ ಘಟನೆ ಹಾಸನ (Hassan) ಜಿಲ್ಲೆಯಲ್ಲಿ ನಡೆದಿದೆ.

ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ನಂತರ ಎಸ್ಕೇಪ್ ಆಗಿದ್ದ ಪತಿ 10 ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದಾನೆ. ಸೆ.6ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ಕೇಶವಮೂರ್ತಿ ಮೂರ್ತಿ ಎಂಬುವವರ ತೋಟದ ಕೆಲಸಕ್ಕೆ ತೆರಳುತ್ತಿದ್ದ ಪತ್ನಿ ಇಂದ್ರಮ್ಮನನ್ನು ಪತಿ ಚಂದ್ರಯ್ಯ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ. ಕೊಲೆ ಮಾಡಿದ ಬಳಿಕ ಚಂದ್ರಯ್ಯ ಕಾಣಿಯಾಗಿದ್ದನು.

ಪತ್ನಿ ಹತ್ಯೆ ಮಾಡಿದ ದಿನದಂದೇ ಕೊಲೆಯಾದ ಜಾಗದಿಂದ ಒಂದು ಕಿ.ಮೀ ದೂರದಲ್ಲಿರುವ ಚಕ್ರವರ್ತಿ ಎಂಬುವವರ ತೋಟದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಚಂದ್ರಯ್ಯ ಆತ್ಮಹತ್ಯೆ ಶರಣಾಗಿದ್ದಾನೆ. ಇತ್ತ ಕೊಲೆ ಆರೋಪಿ ಚಂದ್ರಯ್ಯನಿಗಾಗಿ ಅರೇಹಳ್ಳಿ ಪೊಲೀಸರು ಹುಡುಕಾಟ ನಡೆಸಿದ್ದರು. ಇಂದು ತೋಟದ ಕೆಲಸಕ್ಕೆ ಕಾರ್ಮಿಕರು ತೆರಳಿದಾಗ ದುರ್ವಾಸನೆ ಬಂದಿದ್ದು, ಸ್ಥಳಕ್ಕೆ ಹೋಗಿ ನೋಡಿದಾಗ ಮರದಲ್ಲಿ ನೇತಾಡುತ್ತಿದ್ದ ಸಂಪೂರ್ಣ ಕೊಳೆತು ಹೋಗಿರುವ ಚಂದ್ರಯ್ಯನ ಶವ ಪತ್ತೆಯಾಗಿದೆ. ಇದನ್ನೂ ಓದಿ: ಮೋದಿ ಹುಟ್ಟುಹಬ್ಬ- 25ಕ್ಕೂ ಹೆಚ್ಚು ಮಕ್ಕಳಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಮುಸ್ಲಿಂ ಮುಖಂಡ

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಶಾಲೆಯ ಲಿಫ್ಟ್‌ನಲ್ಲಿ ಸಿಲುಕಿ ಶಿಕ್ಷಕಿ ಸಾವು

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *