ಧಾರ್ಮಿಕ ಧ್ವಜ ಸುಟ್ಟ ಪ್ರಕರಣ- ಇಬ್ಬರ ಬಂಧನ

ತುಮಕೂರು: ಈದ್ ಮಿಲಾದ್ (Eid Milad) ಹಬ್ಬದ ದಿನ ಶಿರಾದಲ್ಲಿ ಮುಸ್ಲಿಮರ ಧಾರ್ಮಿಕ ಹಸಿರು ಧ್ವಜವನ್ನು (Religious Flag) ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ.

ಗ್ರಾನೈಟ್ ಕೆಲಸ ಮಾಡುವ ರಮೇಶ್(25) ಹಾಗೂ ಪೇಂಟಿಂಗ್ ಕೆಲಸ ಮಾಡುವ ದೇವಿ ಪ್ರಸಾದ್(19) ಬಂಧಿತ ಆರೋಪಿಗಳು. ಹಬ್ಬದ ದಿನ ಧ್ವಜ ಸುಟ್ಟ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಶಿರಾದ ದರ್ಗಾ ಸರ್ಕಲ್‌ನಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಸ್ಟೇರಿಂಗ್ ಕಟ್ ಆಗಿ ಬಸ್ ಗದ್ದೆಗೆ ನುಗ್ಗಿದ ರಭಸಕ್ಕೆ ಅರ್ಧಕ್ಕೆ ಮುರಿದ ಕರೆಂಟ್ ಕಂಬ!

ಶಿರಾ ಮತೀಯ ಸೂಕ್ಷ್ಮ ಪ್ರದೇಶವಾದ ಹಿನ್ನೆಲೆಯಲ್ಲಿ ಖುದ್ದು ಎಸ್.ಪಿ ರಾಹುಲ್ ಕುಮಾರ್ ಶಹಪುರವಾಡ್ ಸ್ಥಳಕ್ಕೆ ತೆರಳಿ ತಪ್ಪಿತಸ್ಥರನ್ನು ಬಂಧಿಸುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ದರು. ಅದರಂತೆ ಇಂದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬೇಟೆಗೆ ಹೋಗಿದ್ದ ನಾಲ್ವರು ಸ್ನೇಹಿತರಲ್ಲಿ ಒಬ್ಬ ನಿಗೂಢ ಸಾವು

Live Tv

[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *