ನಿರೀಕ್ಷೆಗೂ ಮೀರಿ ಯಶಸ್ವಿ: ರಾಜ್ಯದಲ್ಲಿ 10.5 ಲಕ್ಷ ಕೋಟಿ ಹೂಡಿಕೆ

ಬೆಂಗಳೂರು: ಮೂರು ದಿನ ಬೆಂಗಳೂರಿನಲ್ಲಿ ನಡೆದ ವಿಶ್ವ ಹೂಡಿಕೆದಾರರ ಸಮಾವೇಶ(Global Investors Meet) ಕರ್ನಾಟಕ ಸರ್ಕಾರದ( Karnataka Government) ನಿರೀಕ್ಷೆ ಮೀರಿ ಯಶಸ್ವಿಯಾಗಿದೆ. ರಾಜ್ಯದಲ್ಲಿ 10.5 ಲಕ್ಷ ಕೋಟಿ ರೂ.ಗೂ ಹೆಚ್ಚು ಹೂಡಿಕೆಯ ಒಪ್ಪಂದಗಳು ಏರ್ಪಟ್ಟಿದೆ.

ಈ ಪೈಕಿ 2.83 ಲಕ್ಷ ಕೋಟಿ ಮೊತ್ತದ ಯೋಜನೆಗಳ ಜಾರಿಗೆ ಏಕಗವಾಕ್ಷಿ ಯೋಜನೆಯಡಿ ರಾಜ್ಯ ಸರ್ಕಾರ ತಕ್ಷಣ ಅನುಮೋದನೆ ನೀಡಿದೆ. ಈ ಜಿಮ್(GIM) ಸಮಾವೇಶದಲ್ಲಿ 7 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಹರಿದು ಬರುವ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಇಟ್ಟುಕೊಂಡಿತ್ತು. ಇದನ್ನೂ ಓದಿ: ಜಿಮ್‌ ಸಮಾವೇಶ – ಮೊದಲ ದಿನವೇ ಕರ್ನಾಟಕದಲ್ಲಿ ಬಂಪರ್ ಹೂಡಿಕೆ

ಕೊನೆಯ ದಿನವಾದ ಇಂದು ನಡೆದ ಸಮಾರೋಪ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಮತ್ತು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಖುಷಿ ಹಂಚಿಕೊಂಡರು.

ಬೊಮ್ಮಾಯಿ ಮಾತನಾಡಿ, ಕನ್ನಡಿಗರು ಬಂಡವಾಳ ಹೂಡಿ ಬಿಸ್ನೆಸ್ ಮ್ಯಾನ್ ಆಗಿ ವಿಶ್ವವಿಖ್ಯಾತರಾಗಬೇಕೆಂಬುದು ನಮ್ಮ ಆಶಯ. ಆ ಸಾಮರ್ಥ್ಯ ಕನ್ನಡಿಗರಲ್ಲಿ ಬರಬೇಕು ಎಂಬುದು ನಮ್ಮ ಉದ್ದೇಶ ಎಂದರು.

ಈ ಹೂಡಿಕೆಯಿಂದ 5 ಲಕ್ಷ ಜನರಿಗೆ ಹೊಸ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಮಾಡಲಾಗಿದೆ. ಜಿಮ್ ಸಮಾವೇಶದಲ್ಲಿ ಮೊದಲ ದಿನವೇ ಭರಪೂರ ಬಂಡವಾಳ ಹೂಡಿಕೆ ಹರಿದು ಬಂದಿತ್ತು. ಮೊದಲ ದಿನ 4.5 ಲಕ್ಷ ಕೋಟಿ ರೂ.ಗೂ ಹೆಚ್ಚು ಮೊತ್ತದ ಒಡಂಬಡಿಕೆಗಳಿಗೆ ಸಹಿ ಹಾಕಲಾಗಿತ್ತು.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *