ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಗೆ ‘ಕಾಂತಾರ’ ಸಪ್ತಮಿ ಗೌಡ ನಾಯಕಿ

ಕಾಂತಾರ (Kantara) ಸಿನಿಮಾದ ನಂತರ ಈ ಸಿನಿಮಾದ ನಾಯಕಿ ಸಪ್ತಮಿ ಗೌಡಗೆ (Sapthami Gowda) ಸಖತ್ ಡಿಮಾಂಡ್ ಕ್ರಿಯೇಟ್ ಆಗಿದೆ. ಕನ್ನಡದಲ್ಲಿ ಮಾತ್ರವಲ್ಲ, ಪರಭಾಷೆಯಿಂದಲೂ ಅವರಿಗೆ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಪರಭಾಷೆಯಿಂದ ಆಫರ್ಸ್ ಬರುತ್ತಿವೆ ಎಂದು ಅವರು ಈಗಾಗಲೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅದಕ್ಕೂ ಮುನ್ನ ಕನ್ನಡದ ಮತ್ತೊಂದು ಸಿನಿಮಾದಲ್ಲಿ ಅವರು ನಟಿಸುವ ಸಾಧ್ಯತೆ ಇದ್ದು, ಮಾತುಕತೆ ಕೂಡ ಆಗಿದೆ ಎಂದು ಹೇಳಲಾಗುತ್ತಿದೆ.

ಪೈಲ್ವಾನ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಕೃಷ್ಣ ಇದೀಗ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಅವರಿಗೆ ಸಿನಿಮಾವೊಂದು ಮಾಡುತ್ತಿದ್ದು, ಈಗಾಗಲೇ ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದೆ. ಸಿನಿಮಾ ಟೈಟಲ್ ಸೇರಿದಂತೆ ಹಲವು ವಿಚಾರಗಳನ್ನೂ ಕೃಷ್ಣ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ಇದೇ ಸಿನಿಮಾಗೆ ಸಪ್ತಮಿ ಗೌಡ  ಅವರನ್ನೂ ಕೇಳಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ:ಕಾಂತಾರ 1 ಕೋಟಿ ಟಿಕೆಟ್ಸ್ ಮಾರಾಟ: ದಾಖಲೆಗಳು ಪುಡಿಪುಡಿ

ಸಪ್ತಮಿ ಗೌಡ ಅವರನ್ನು ಕೃಷ್ಣ  ಭೇಟಿಯಾಗಿ ಸಿನಿಮಾದ ಕಥೆ ಮತ್ತು ಪಾತ್ರದ ಹಿನ್ನೆಲೆಯನ್ನು ಹೇಳಿದ್ದಾರೆ ಎಂದು ಗೊತ್ತಾಗಿದ್ದು, ಬಹುಶಃ ಸಪ್ತಮಿ ಅವರೇ ಈ ಚಿತ್ರದ ನಾಯಕಿ ಎನ್ನುತ್ತಿದೆ ಗಾಂಧಿ ನಗರ ಮೂಲ. ಆದರೆ, ಈ ಕುರಿತು ಕೃಷ್ಣ ಆಗಲಿ ಅಥವಾ ಸಪ್ತಮಿ ಗೌಡ ಆಗಲಿ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಹೇಳುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

ಕಾಳಿ ಸಿನಿಮಾದ ಕಥೆಯೂ ರೋಚಕವಾಗಿದೆ. ಕಾವೇರಿ ನದಿ ಗಲಾಟೆಯಲ್ಲಿ ನಡೆದಂತಹ ನೈಜ ಪ್ರೇಮಕಥೆಯನ್ನು ಈ ಸಿನಿಮಾಗಾಗಿ ನಿರ್ದೇಶಕರು ಅಳವಡಿಸಿಕೊಂಡಿದ್ದಾರೆ. ಅಲ್ಲದೇ, ರೆಬಲ್ ಈ ಸಿನಿಮಾದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದು, ಈಗಾಗಲೇ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಸದ್ಯ ಅಭಿಷೇಕ್ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಸದ್ಯದಲ್ಲೇ ಕಾಳಿ ಸಿನಿಮಾದ ಶೂಟಿಂಗ್ ನಲ್ಲೂ ಅವರು ಪಾಲ್ಗೊಳ್ಳಲಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *