KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೊಬ್ಬ ಗಂಭೀರ

ಚಾಮರಾಜನಗರ: ಕೆಎಸ್‍ಆರ್‍ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬಂದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ.

ದೇವರಹಳ್ಳಿ ಗ್ರಾಮದ ಮೂವತ್ತು ವರ್ಷದ ಮೂರ್ತಿ ಸ್ದಳದಲ್ಲೇ ಸಾವನ್ನಪಿದ ದುರ್ದೈವಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಹಿಂಬಂದಿ ಸವಾರನಿಗೆ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾಲೂಕಿನ ಹಂಗಳ ಗ್ರಾಮದಿಂದ ದೇವರಹಳ್ಳಿ ಗ್ರಾಮಕ್ಕೆ ಬೈಕ್ ನಲ್ಲಿ ಗ್ಯಾಸ್ ತೆಗೆದುಕೊಂಡು ಹೋಗುತ್ತಿರುವಾಗ ಎದುರಿನಿಂದ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿದೆ.

ಈ ವೇಳೆ ಬೈಕ್ ಸವಾರ ಬಸ್ ಚಕ್ರಕ್ಕೆ ಸಿಲುಕ್ಕಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *