ಮರಕ್ಕೆ ಡಿಕ್ಕಿ ಹೊಡೆದ ಕಾರ್ – ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

ಮಂಡ್ಯ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ.

22 ವರ್ಷದ ಹೇಮಂತ್ ಕುಮಾರ್ ಮೃತ ದುರ್ದೈವಿ. ಮಂಡ್ಯ ಪಿಇಎಸ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದ ಯತೀಶ್, ಪೃಥ್ವಿರಾಜ್, ಹೇಮಂತ್ ಕುಮಾರ್, ಶಿವಕುಮಾರ್ ಎಂಬವರು ಗೆಳೆಯನ ಅಕ್ಕನ ಮದುವೆಗೆ ನಾಗಮಂಗಲಕ್ಕೆ ಬಂದಿದ್ದರು. ರಾತ್ರಿ ಆರತಕ್ಷತೆ ಮುಗಿಸಿಕೊಂಡು ಗೆಳೆಯನ ಮನೆಗೆ ಹೋಗುವಾಗ ಜೇವರ್ಗಿ-ಚಾಮರಾಜನಗರ ರಸ್ತೆಯಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.

ಪರಿಣಾಮ ಹೇಮಂತ್ ಕುಮಾರ್ ಸಾವನ್ನಪ್ಪಿದ್ದರೆ, ಯತೀಶ್, ಪೃಥ್ವಿರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನುಳಿದ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಸಂಬಂಧ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Comments

Leave a Reply

Your email address will not be published. Required fields are marked *