ರಾಯಚೂರಿನಲ್ಲಿ ರಾತ್ರಿ ಹೊತ್ತು ಜಿಲ್ಲಾಧಿಕಾರಿಗಳಿಂದ ಬೆಳೆಹಾನಿ ಸಮೀಕ್ಷೆ!

ರಾಯಚೂರು: ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿಂದ ಸುರಿದ ಭಾರೀ ಮಳೆ ರೈತರ ಕೋಟ್ಯಾಂತರ ರೂಪಾಯಿ ಬೆಳೆ ಹಾಳು ಮಾಡಿದೆ. ಆದ್ರೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ಕೃಷಿ ಅಧಿಕಾರಿಗಳೊಂದಿಗೆ ರಾತ್ರೋರಾತ್ರಿ ರೈತರ ಹೊಲಗಳಿಗೆ ತೆರಳಿ ಸರ್ವೇ ಮಾಡಿ ವರದಿ ತಯಾರಿಸುತ್ತಿದ್ದಾರೆ.

ಹಗಲು ವೇಳೆಯಲ್ಲಿ ವೀಕ್ಷಣೆ ಮಾಡುವ ಬದಲು ಸಂಜೆ, ರಾತ್ರಿ ವೇಳೆ ಕಾಟಾಚಾರಕ್ಕೆ ಸಮೀಕ್ಷೆ ಮಾಡಿದರೆ ಸೂಕ್ತ ಪರಿಹಾರ ಸಿಗುವುದಿಲ್ಲ ಅನ್ನೋದು ರೈತರ ಅಳಲು. ರಾಯಚೂರು ತಾಲೂಕಿನ ಉಡಮಗಲ್, ಆಶಾಪುರ, ಜಾಲಿಬೆಂಚಿ ಗ್ರಾಮಗಳಲ್ಲಿ ಸಂಜೆಯಿಂದ ರಾತ್ರಿವೇಳೆ ಸಮೀಕ್ಷೆ ಮಾಡಿ ಮುಗಿಸಿದ್ದಾರೆ.

ಬೆಳೆ ಹಾನಿ ಸಮೀಕ್ಷೆ ಸಮರ್ಪಕವಾಗಿ ನಡೆಯುತ್ತಿಲ್ಲ ಅನ್ನೋ ಆರೋಪದ ಮಧ್ಯೆ ಜಿಲ್ಲಾಧಿಕಾರಿಗಳ ನಡೆ ರೈತರಲ್ಲಿ ಆಕ್ರೋಶ ಮೂಡಿಸಿದೆ. ಈರುಳ್ಳಿ, ಭತ್ತ, ಹತ್ತಿ, ಮೆಣಸಿನಕಾಯಿ, ತೊಗರಿ ಸೇರಿ ಎಲ್ಲಾ ಬೆಳೆಗಳು ಹಾಳಾಗಿದ್ದು ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಅಂತ ರೈತರು ಆರೋಪಿಸಿದ್ದಾರೆ.

Comments

Leave a Reply

Your email address will not be published. Required fields are marked *