10ರೂ. ಹೆಚ್ಚು ಪಡೆದಿದ್ದಕ್ಕೆ ಮದ್ಯ ಮಾರಾಟಗಾರ, ಗ್ರಾಹಕರ ಮಧ್ಯೆ ಜಗಳ

ಕೊಪ್ಪಳ: ಎಂಆರ್ ಪಿ ದರಕ್ಕಿಂತ ಹೆಚ್ಚಿಗೆ ರೂ. ಪಡೆದು ಮದ್ಯ ಮಾರಾಟ ಮಾಡಿದ್ದಕ್ಕೆ ಗ್ರಾಹಕರು ಹಾಗೂ ಮಾರಾಟಗಾರ ನಡುವೆ ಮಾತಿನ ಚಕಮಕಿಯಾಗಿರೋ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.

ಇಲ್ಲಿನ ಜುಲಾಯ್ ನಗರದಲ್ಲಿರೋ ಸರಕಾರಿ ಸ್ವಾಮ್ಯದ ಎಂಎಸ್‍ಐಎಲ್ ಮಳಿಗೆಯಲ್ಲಿ ಎಂಆರ್ ಪಿ ದರಕ್ಕಿಂತ 10 ರೂಪಾಯಿ ಹೆಚ್ಚಿಗೆ ಪಡೆದಿದ್ದಾರೆ. ಆಗ ಗ್ರಾಹಕರು ನೀವು ಎಂಆರ್ ಪಿ ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಬೋರ್ಡ್ ಹಾಕಿದ್ದೀರಿ ಅಂತ ಜಗಳ ಆರಂಭಿಸಿದ್ದಾರೆ.

ಆದ್ರೆ ಎಂಆರ್ ಪಿ ದರಕ್ಕಿಂತ ಹೆಚ್ಚಿನ ದರದಲ್ಲಿ ಗ್ರಾಹಕರಿಗೆ ಮದ್ಯ ಮಾರಾಟ ಮಾಡುತ್ತಿದ್ದೀರಿ ಎಂದಾಗ ಮಳಿಗೆಯ ಮಾರಾಟಗಾರ ಶಾಸಕ ಇಕ್ಬಾಲ್ ಅನ್ಸಾರಿ, ಸಿಎಲ್ 2 ಮದ್ಯದಂಗಡಿಯಲ್ಲಿ ಎಂಆರ್ ಪಿ ದರಕ್ಕಿಂತ 40 ರೂಪಾಯಿ ಹೆಚ್ಚಿಗೆ ಕೊಟ್ಟು ಕುಡಿಯುತ್ತೀರಿ.ನಮಗೆ 10 ರೂಪಾಯಿ ಕೊಡೋಕೆ ಕಿರಿಕ್ ಮಾಡುತ್ತೀರಿ ಎಂದು ಮಾತಿಗೆ ಮಾತು ಬೆಳೆದು ದೊಡ್ಡ ಗಲಾಟೆ ಕೂಡಾ ನಡೆದಿದೆ. ಬಳಿಕ ಗ್ರಾಹಕರು ಅಂಗಡಿ ಬಂದ್ ಮಾಡಿಸಿದ್ದಾರೆ.

Comments

Leave a Reply

Your email address will not be published. Required fields are marked *