ಮನೆಯ ಗೋದಾಮಿನಲ್ಲಿ ಅಡಗಿ ಕೂತಿದ್ದ 10 ಅಡಿಯ ಬೃಹತ್ ಕಾಳಿಂಗ ಸರ್ಪ ರಕ್ಷಣೆ

ಚಿಕ್ಕಮಗಳೂರು: ಮನೆಯ ಗೋದಾಮಿನಲ್ಲಿ ಅಡಗಿ ಕೂತಿದ್ದ 10 ಅಡಿಯ ಬೃಹತ್ ಕಾಳಿಂಗ ಸರ್ಪವನ್ನ ಉರಗ ತಜ್ಞರ ಸಹಾಯದಿಂದ ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮೇಗರಮಕ್ಕಿ ಗ್ರಾಮದಲ್ಲಿ ನಡೆದಿದೆ.

ಮೇಗರಮಕ್ಕಿ ಗ್ರಾಮದ ಪೃಥ್ವಿ ಎಂಬವರ ಮನೆಯಲ್ಲಿ ಈ ಬೃಹತ್ ಕಾಳಿಂಗ ಸೆರೆಯಾಗಿದೆ. ಹಾವನ್ನು ಕಂಡ ಮನೆ ಮಂದಿ ಗೋದಾಮಿಗೆ ಬೀಗ ಹಾಕಿ ಉರಗ ತಜ್ಞ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಕಾಳಿಂಗ ಸರ್ಪದ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕ ಅಗ್ರಹಾರ ವಲಯ ಅರಣ್ಯಾಧಿಕಾರಿ ಹಾಗೂ ಉರಗ ತಜ್ಞ ಹರೀಂದ್ರ ಅವರು ಸತತ ಒಂದು ಗಂಟೆ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಸದ್ಯ ರಕ್ಷಣೆ ಮಾಡಿರುವ ಕಾಳಿಂಗ ಸರ್ಪವನ್ನು ಹತ್ತಿರ ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ.

Comments

Leave a Reply

Your email address will not be published. Required fields are marked *