ಐವರು ಯುವಕರ ಜೊತೆ ಮೈಸೂರು ಪ್ರವಾಸಕ್ಕೆ ತೆರಳಿದ್ದ 10ನೇ ಕ್ಲಾಸ್ ವಿದ್ಯಾರ್ಥಿನಿ ಮಿಸ್ಸಿಂಗ್!

ಹಾಸನ: ಪ್ರವಾಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯನ್ನ ಕರೆದುಕೊಂಡು ಹೋಗಿದ್ದ ಐವರು ಯುವಕರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.

ಅರುಣ್, ಮಹೇಶ್, ಶರತ್ ರಾಜ್ ಹಾಗೂ ರಾಜೇಶ್ ಬಂಧಿತ ಆರೋಪಿಗಳು. ಓರ್ವನ ಹೆಸರು ತಿಳಿದು ಬಂದಿಲ್ಲ. ನಾಪತ್ತೆಯಾದ ಬಾಲಕಿ ಹಾಸನ ಪದವಿ ಪೂರ್ವ ಹಾಸ್ಟೆಲ್‍ನಲ್ಲಿದ್ದು, ಎಸ್‍ಎಸ್‍ಎಲ್‍ಸಿ ಓದುತ್ತಿದ್ದಳು.

ಜೂನ್ 19 ರಂದು ಅರುಣ್, ಮಹೇಶ್, ಶರತ್ ರಾಜ್ ಹಾಗೂ ರಾಜೇಶ್ ಎಂಬವರು ಬಾಲಕಿಯನ್ನು ಪ್ರವಾಸಕ್ಕೆಂದು ಮೈಸೂರಿಗೆ ಕರೆದುಕೊಂಡು ಹೋಗಿದ್ದರು. ಪ್ರವಾಸದ ವೇಳೆ ಬಾಲಕಿ ನಾಪತ್ತೆಯಾಗಿದ್ದಾಳೆ ಎಂದು ಯುವಕರು ಹೇಳಿದ್ದರು. ಆದರೆ ಇತ್ತ ಬಾಲಕಿಯ ಪೋಷಕರು ಯುವಕರೇ ತಮ್ಮ ಮಗಳನ್ನು ಅಪಹರಣ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಹಾಸನ ಮಹಿಳಾ ಠಾಣೆ ಪೊಲೀಸರು, ತನಿಖೆ ತೀವ್ರಗೊಳಿಸಿದ್ದಾರೆ.

Comments

Leave a Reply

Your email address will not be published. Required fields are marked *