ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ- ಚಕ್ರದಡಿ ಸಿಲುಕಿ ಸವಾರ ದುರ್ಮರಣ

ಬೆಂಗಳೂರು: ಬೈಕ್‍ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಆನೇಕಲ್ ತಾಲೂಕಿನ ತಟ್ಟನಹಳ್ಳಿ ನಿವಾಸಿ ಮಂಜುನಾಥ್ (30) ಮೃತ ದುರ್ದೈವಿ. ಇವರು ಇಂದು ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.

ಈ ಘಟನೆ ಹೊಸೂರು ಮುಖ್ಯರಸ್ತೆ ಹೊಸರೋಡ್ ಜಂಕ್ಷನ್ ನಲ್ಲಿ ನಡೆದಿದೆ. ತನ್ನ ಬೈಕಿಗೆ ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಮಂಜುನಾಥ್ ಕೆಳಗೆ ಬಿದ್ದಿದ್ದು, ಅವರ ಮೇಲೆ ಟಿಪ್ಪರ್ ಹರಿದಿದೆ. ಘಟನೆ ನಡೆದ ಕೂಡಲೇ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಟಿಪ್ಪರ್ ಚಾಲಕ ಗಣೇಶನನ್ನ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *