ಹೆರಿಗೆ ವೇಳೆ ತಾಯಿ ಸಾವು – ತಬ್ಬಲಿಯಾದ ನವಜಾತ ಶಿಶು

ಚಿಕ್ಕಬಳ್ಳಾಪುರ: ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತಳ ಕುಟುಂಬಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ತಾಯಿ ಹಾಗೂ ಮಕ್ಕಳ ಆಸ್ಪತ್ರೆ ಎದುರು ನಡೆದಿದೆ.

ತಾಲೂಕಿನ ಬೈರಾಪುರ ಗ್ರಾಮದ ಸವಿತಾ(22) ಮೃತ ಮಹಿಳೆ. ಹೆರಿಗೆಗಾಗಿ ತಾಯಿ, ಮಗು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆ ಆಧಿಕ ರಕ್ತಸ್ರಾವದಿಂದ ಹೆರಿಗೆಯಾದ ಕ್ಷಣದಲ್ಲೇ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಇದೀಗ ತಾಯಿ ಕಳೆದುಕೊಂಡು ನವಜಾತ ಶಿಶು ಅನಾಥವಾಗಿದ್ದು, ಕುಟುಂಬಸ್ಥರು ವೈದ್ಯರ ವಿರುದ್ಧ ಸರ್ಕಾರಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?

ಮೃತಳ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ. ಹೊಟ್ಟೆಯಲ್ಲಿದ್ದ ಮಗು 4 ಕೆ.ಜಿ. ತೂಕ ಇದ್ದು ಹೆರಿಗೆ ಮಾಡಿಸುವುದು ಸವಾಲಿನ ಕೆಲಸವಾಗಿತ್ತು. ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದರೆ, ನಾವು ಕರೆದುಕೊಂಡು ಹೋಗುತ್ತಿದ್ದೆವು. ಆದರೆ ವೈದ್ಯರು ಇಲ್ಲಿಯೇ ಹೆರಿಗೆ ಮಾಡುವುದಾಗಿ ಧೈರ್ಯ ಹೇಳಿ ಕೊನೆಗೆ ಜೀವವನ್ನು ತೆಗೆದಿದ್ದಾರೆ. ಹುಟ್ಟಿದ ಕ್ಷಣದಲ್ಲಿ ಮಗುವಿಗೆ ತಾಯಿ ಇಲ್ಲದಂತೆ ಮಾಡಿದ್ದಾರೆ ಎಂದು ಮೃತಳ ಗಂಡ ರಮೇಶ್ ಆರೋಪಿಸಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ತೈಲ ಆಮದಿಗೆ ಮಾತ್ರ ಅಮೆರಿಕ ನಿರ್ಬಂಧ – ಯುರೇನಿಯಂಗೆ ಇಲ್ಲ ನಿಷೇಧ

Comments

Leave a Reply

Your email address will not be published. Required fields are marked *