ಆಸ್ಪತ್ರೆಯಲ್ಲಿ ಮಗುಬಿಟ್ಟು ಕರುಳಬಳ್ಳಿ ಕಡಿದುಕೊಂಡಳು!

ಧಾರವಾಡ: ಎಷ್ಟೋ ಜನರು ಮಕ್ಕಳೇ ಆಗಲಿಲ್ಲವೆಂದು ಜೀವನದಲ್ಲಿ ಜಿಗುಪ್ಸೆ ಹೊಂದುತ್ತಾರೆ. ಆದರೆ ತಾಯಿಯೊಬ್ಬಳು ತನ್ನ ಎರಡು ತಿಂಗಳ ಮಗುವನ್ನು ಜಿಲ್ಲಾಸ್ಪತ್ರೆ ಆವರಣದ ಕ್ಯಾಂಟಿನ್ ಬಳಿ ಬಿಟ್ಟು ಹೋದ ಘಟನೆ ಧಾರವಾಡದಲ್ಲಿ ಮಂಗಳವಾರ ನಡೆದಿದೆ.

ಬಿಟ್ಟು ಹೋಗಿರುವ ಹೆಣ್ಣು ಮಗು ಕೇವಲ ಎರಡು ತಿಂಗಳ ಹಸುಗುಸು. ಇಂದು ಬೆಳಿಗ್ಗೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಮಗುವನ್ನು ಹೊತ್ತು ಸಂದೇಹಾಸ್ಪದವಾಗಿ ಓಡಾಡುತ್ತಿದ್ದ ಮಹಿಳೆಯೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನು ಓದಿ: ಮಕ್ಕಳಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ವೃದ್ಧ ದಂಪತಿ

ಆಸ್ಪತ್ರೆಯ ಆವರಣದಲ್ಲಿ ಮಗುವೊಂದೇ ಇರುವುದನ್ನು ಕಂಡ ಜನರು, ಎತ್ತಿಕೊಂಡು ಹೋಗಿ ಆಸ್ಪತ್ರೆಯ ವೈದ್ಯರಿಗೆ ಮುಟ್ಟಿಸಿದ್ದಾರೆ. ಸದ್ಯ ವೈದ್ಯರು ಮಗುವನ್ನು ಐಸಿಯುನಲ್ಲಿ ಇಟ್ಟು ಆರೈಕೆ ಮಾಡುತ್ತಿದ್ದಾರೆ. ನಂತರ ಮಗುವನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳ ಸುಪರ್ದಿಗೆ ನೀಡುವುದಾಗಿ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

ಮಗುವನ್ನು ಬಿಟ್ಟು ಹೋದ ಪ್ರಕರಣ ಕುರಿತು ಉಪನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಮಗು ಬಿಟ್ಟು ಹೋಗಿರುವ ತಾಯಿಗಾಗಿ ಹುಡುಕಾಟ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *