ನಟ ಚೇತನ್ ನಟನೆಯ ಅತಿರಥ ಚಿತ್ರದ ಪೋಸ್ಟರ್ ಹರಿದು ಅಜಾದ್ ಹಿಂದ್ ಸೇನಾ ಕಾರ್ಯಕರ್ತರ ಪ್ರತಿಭಟನೆ

ಚಾಮರಾಜನಗರ: ಹಿಂದೂ ಧರ್ಮದ ಬಗ್ಗೆ ಹಗುರವಾಗಿ ಮಾತಾನಾಡಿದ್ದಾರೆ ಎಂದು ಚಾಮರಾಜನಗರದಲ್ಲಿ ಅಜಾದ್ ಹಿಂದ್ ಸೇನಾ ಕಾರ್ಯಕರ್ತರು ಚೇತನ್ ನಟನೆಯ ಅತಿರಥ ಚಿತ್ರದ ಪೋಸ್ಟರ್ ಗಳನ್ನು ಹರಿದು ಪ್ರತಿಭಟನೆ ನಡೆಸಿದ್ದಾರೆ.

ನಗರದ ಸಿಂಹ ಮೂವಿ ಪ್ಯಾರಡೈಸ್ ನಲ್ಲಿ ಶುಕ್ರವಾರ ತೆರೆ ಕಂಡ ಅತಿರಥ ಚಿತ್ರದ ಪೋಸ್ಟರ್ ಗಳನ್ನು ಹರಿದು ನಟ ಚೇತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚೇತನ್ ಶಿವಕುಮಾರಸ್ವಾಮೀಜಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಅವಮಾನ ಮಾಡಿದ್ದಾರೆ. ಇದಲ್ಲದೇ ಹಿಂದೂ ಧರ್ಮದ ಬಗ್ಗೆ ಹಗುರವಾಗಿ ಮಾತನಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ.

ಇವರು ಸಮಾಜದಲ್ಲಿ ಅಶಾಂತಿಯನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಆದ್ದರಿಂದ ಇವರ ನಟನೆಯ ಚಿತ್ರವನ್ನು ಬ್ಯಾನ್ ಮಾಡಬೇಕೆಂದು ಅಜಾದ್ ಹಿಂದ್ ಸೇನೆಯ ಕಾರ್ಯಕರ್ತರು ಅತಿರಥ ಚಿತ್ರದ ಪೋಸ್ಟರ್ ಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು.

Comments

Leave a Reply

Your email address will not be published. Required fields are marked *