ಶಿಕ್ಷಕರ ಬೇಜವಾಬ್ದಾರಿಯಿಂದ ವಿದ್ಯಾರ್ಥಿಯ ಕಣ್ಣು ಹೋಯ್ತು!

ವಿಜಯನಗರ: ಶಿಕ್ಷಕರ ಬೇಜವಾಬ್ದಾರಿಯಿಂದ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ನಡೆದಿದೆ. ಕೂಡ್ಲಿಗಿ ಸಮೀಪದ ಚೌಡಪುರ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಆರು ವರ್ಷದ ಮಗು ಶಿಕ್ಷಕರ ಬೇಜವಾಬ್ದಾರಿತನದಿಂದ ಕಣ್ಣು ಕಳೆದುಕೊಂಡಿದ್ದಾನೆ.

ಚೌಡಾಪುರದ ಸರ್ಕಾರಿ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದ ಪ್ರಜ್ವಲ್ ಕಣ್ಣು ಕಳೆದುಕೊಂಡ ವಿದ್ಯಾರ್ಥಿ. ಶಾಲೆಯಲ್ಲಿ  300 ಮಕ್ಕಳಿದ್ದಾರೆ. ಮಕ್ಕಳಿಗೆ ಸರಿಯಾಗಿ ಶಿಕ್ಷಕರು ಪಾಠ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಹೀಗಿರುವಾಗ ಶಿಕ್ಷಕರ ಬದಲಿಗೆ ಶಾಲೆಯಲ್ಲಿ ಮತ್ತೊಂದು ಮಗುವಿಗೆ ಶಾಲೆಯ ಜವಾಬ್ದಾರಿ ಹೊರಿಸಿ, ಮಕ್ಕಳು ಗಲಾಟೆ ಮಾಡದಂತೆ ನೋಡಿಕೊಳ್ಳುವಂತೆ ಹೇಳಿದ್ದಾರೆ. ಆಗ ಪ್ರಜ್ವಲ್ ಸೇರಿದಂತೆ ಉಳಿದ ಮಕ್ಕಳು ಗಲಾಟೆ ಮಾಡಿದ್ದಾರೆ. ಇದನ್ನೂ ಓದಿ: ವೈರಿ ದೇಶವನ್ನು ಪಕ್ಕದಲ್ಲೇ ಇರಿಸಿಕೊಂಡು ಪ್ರಧಾನಿಗೆ ದಿಗ್ಬಂಧನ: ಪೇಜಾವರಶ್ರೀ ಕಳವಳ

ಶಾಲೆಯ ಜವಾಬ್ದಾರಿ ಹೊತ್ತ ಹುಡುಗ, ಕೈಯಲ್ಲಿ ಹಿಡಿದ ಕಡ್ಡಿ ಎಸೆದಿದ್ದಾನೆ. ಅದು ನೇರವಾಗಿ‌ ವಿದ್ಯಾರ್ಥಿ ಪ್ರಜ್ವಲ್ ಕಣ್ಣಿಗೆ ಬಿದ್ದಿದೆ. ಪರಿಣಾಮ ಪ್ರಜ್ವಲ್‌ನ ಕಣ್ಣು ಗುಡ್ಡೆ ಸಂಪೂರ್ಣ ಹಾಳಾಗಿ ಕಣ್ಣು ಕುರುಡಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಿದ ವೈದ್ಯರು ಮಗುವಿಗೆ ಕಣ್ಣಿನ ದೃಷ್ಟಿ ಮರಳಿ ಬರುವುದಿಲ್ಲ ಎಂದಿದ್ದಾರೆ.

ಈ ಸಂಬಂಧ ಪೋಷಕರು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಿಕ್ಷಕರ ಬೇಜವಾಬ್ದಾರಿ ಕುರಿತು ಶಿಕ್ಷಣ ಇಲಾಖೆಗೆ ಪೋಷಕರು ಸಾಕಷ್ಟು ದೂರು ನೀಡಿದ್ದರು. ಶಿಕ್ಷಣ ಇಲಾಖೆ ಇತ್ತ ಗಮನ ಹರಿಸಿಲ್ಲಾ ಎನ್ನುವುದು ಸ್ಥಳೀಯರ ಆರೋಪವಾಗಿದೆ. ಇದನ್ನೂ ಓದಿ: ನಾಯಿ ಹುಟ್ಟುಹಬ್ಬ ಆಚರಿಸಲು 11 ಲಕ್ಷ ರೂ. ಖರ್ಚು ಮಾಡಿದ ಮಹಿಳೆ

Comments

Leave a Reply

Your email address will not be published. Required fields are marked *