ಹುಡುಗಿ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಬಾಗಲಕೋಟೆ: ಯುವಕನೊಬ್ಬನನ್ನು ಕೊಡಲಿಯಿಂದ ಬರ್ಬರವಾಗಿ ಕೊಲೆಗೈದ ಘಟನೆ ಬಾಗಲಕೋಟೆ ತಾಲೂಕಿನ ಶಿರೂರ ಗ್ರಾಮದಲ್ಲಿ ನಡೆದಿದೆ. ಶಿರೂರ ಗ್ರಾಮದ ಶರಣಪ್ಪ ಹಿರೇಕೊಂಬಿ(18) ಕೊಲೆಯಾದ ಯುವಕ. ಅದೇ ಗ್ರಾಮದ ಆನಂದ ಬೆನ್ನೂರು (24) ಹತ್ಯೆ ಮಾಡಿದ ಆರೋಪಿ. ಕೊಲೆಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಆದರೆ ಇಬ್ಬರ ನಡುವೆ ಹುಡುಗಿಯ ವಿಚಾರಕ್ಕೆ ಜಗಳವಾಗಿತ್ತು ಎನ್ನಲಾಗಿದೆ.

ಘಟನೆಯ ವಿವರ:
ಶಿರೂರು ಗ್ರಾಮದ ಗುಳೇದಗುಡ್ಡ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್‍ನಲ್ಲಿ ಶರಣಪ್ಪ ಕೆಲಸ ಮಾಡುತ್ತಿದ್ದ. ಎಂದಿನಂತೆ ಇಂದು ಕೂಡಾ ಶರಣಪ್ಪ ಕೆಲಸದಲ್ಲಿ ತೊಡಗಿದ್ದ. ಈ ವೇಳೆ ಅಲ್ಲಿಗೆ ಕೊಡಲಿ ಹಿಡಿದು ಬಂದ ಆನಂದ ಶರಣಪ್ಪನ ಮೇಲೆ ಹಲ್ಲೆ ಮಾಡಿದ್ದಾನೆ. ಪರಿಣಾಮ ಗಂಭಿರವಾಗಿ ಗಾಯಗೊಂಡಿದ್ದ ಶರಣಪ್ಪ ಅತಿಯಾದ ರಕ್ತಸ್ರಾವದಿಂದ ಸ್ಥಳಲ್ಲಿಯೇ ಮೃತಪಟ್ಟಿದ್ದಾನೆ. ಇದರಿಂದ ಗಾಬರಿಗೊಂಡ ಆರೋಪಿ ಯುವಕ ಅಲ್ಲಿಂದ ಪರಾರಿಯಾಗಿದ್ದ.

ಪೆಟ್ರೋಲ್ ಬಂಕ್‍ನಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕೊಲೆಯ ದೃಶ್ಯ ಸೆರೆಯಾಗಿದೆ. ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *