`ನನ್ನ ಜನರಿಗಾಗಿ ನನ್ನ ಹೆಜ್ಜೆ’- ಅಮ್ಮನ ಜೊತೆ ಪ್ರಚಾರಕ್ಕಿಳಿದ ಅಭಿಷೇಕ್

ಮಂಡ್ಯ: ಲೋಕಸಭಾ ಚುನಾವಣೆಗೆ ಈಗಾಗಲೇ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪ್ರಚಾರದಲ್ಲಿ ತೊಡಗಿದ್ದಾರೆ. ಈಗ ಅವರ ಮಗ, ನಟ ಅಭಿಷೇಕ್ ಅಂಬರೀಶ್ ಅವರ ಸರದಿಯಾಗಿದ್ದು, ಅಭಿಷೇಕ್ ಕೂಡ ಪ್ರಚಾರದಲ್ಲಿ ತಮ್ಮ ತಾಯಿ ಜೊತೆ ಭಾಗವಹಿಸಲಿದ್ದಾರೆ.

ಅಭಿಷೇಕ್ ತಮ್ಮ ಫೇಸ್‍ಬುಕ್‍ನಲ್ಲಿ ತಮ್ಮ ತಾಯಿಯೊಂದಿಗೆ ಚುನಾವಣಾ ಪ್ರಚಾರಕ್ಕಾಗಿ ಮಳವಳ್ಳಿಗೆ ಬರುವುದಾಗಿ ಪೋಸ್ಟ್ ಮಾಡಿದ್ದಾರೆ.

ಪೋಸ್ಟ್ ನಲ್ಲಿ ಏನಿದೆ?
`ನನ್ನ ಜನರಿಗಾಗಿ ನನ್ನ ಹೆಜ್ಜೆ. ನಾಳೆ ನಾನು ಮಳವಳ್ಳಿಗೆ ಬರುತ್ತಿದ್ದೇನೆ. ನನ್ನ ಅಮ್ಮನೊಂದಿಗೆ ಅದು ಚುನಾವಣಾ ಪ್ರಚಾರಕ್ಕಾಗಿ. ನನ್ನ ಅಪ್ಪ ಯಾವಾಗಲೂ ನೆನಪಿಸಿಕೊಳ್ಳುತ್ತಿದ್ದ ಊರು ಮಳವಳ್ಳಿ. ನನ್ನ ತಾತ ಸಾಕಷ್ಟು ವರ್ಷಗಳ ಕಾಲ ಜೀವನ ನಡೆಸಿದ ಮಳವಳ್ಳಿಗೆ ನಾನು ಅಮ್ಮನೊಂದಿಗೆ ಬರುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಅಭಿಷೇಕ್ ಇಷ್ಟು ದಿನ ತಮ್ಮ ಮೊದಲ ‘ಅಮರ್’ ಚಿತ್ರದಲ್ಲಿ ಬ್ಯುಸಿಯಾಗಿದ್ದರು. ಈಗ ಅವರು ತಮ್ಮ ತಾಯಿ ಸುಮಲತಾ ಅವರ ಜೊತೆ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *