ಅಕಾಡೆಮಿಗಳ ಅಧ್ಯಕ್ಷ, ಸದಸ್ಯರ ನೇಮಕಾತಿ ರದ್ದು

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ 15 ವಿವಿಧ ಅಕಾಡೆಮಿಗಳ ಅಧ್ಯಕ್ಷರ ಮತ್ತು ಸದಸ್ಯರ ನೇಮಕಾತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇತ್ತೀಚೆಗಷ್ಟೇ ಎಲ್ಲ ಪ್ರಾಧಿಕಾರ ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಆಡಳಿತ ಮಂಡಳಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿತ್ತು. ಇದೀಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 15 ವಿವಿಧ ಅಕಾಡೆಮಿಗಳ ಅಧ್ಯಕ್ಷರುಗಳ ನೇಮಕಾತಿಯನ್ನು ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಹಿಂದಿನ ಸರ್ಕಾರದ ಎಲ್ಲ ಯೋಜನೆಗಳನ್ನು ಬದಲಾಯಿಸುತ್ತಿರುವ ಬಿಜೆಪಿ ಸರ್ಕಾರ ಟಿಪ್ಪು ಜಯಂತಿಯನ್ನು ಸಹ ರದ್ದುಗೊಳಿಸಿತ್ತು. ಹಿಂದಿನ ಸರ್ಕಾರದ ವಿವಿಧ ಕಾರ್ಯಕ್ರಮಗಳು ಹಾಗೂ ಯೋಜನೆಗಳಲ್ಲಿ ಕೆಲವನ್ನು ರದ್ದುಗೊಳಿಸುತ್ತಿದೆ. ಕೆಲವನ್ನು ಮಾರ್ಪಾಡು ಮಾಡಲು ಹಾಗೂ ಹೆಸರು ಬದಲಾಯಿಸಲು ಚಿಂತನೆ ನಡೆಸಿದೆ.

Comments

Leave a Reply

Your email address will not be published. Required fields are marked *