ಆಕ್ಸಿಡೆಂಟ್ ರಭಸಕ್ಕೆ ಹೊತ್ತಿ ಉರಿದ ಕಂಟೇನರ್ – ಚಾಲಕರಿಬ್ಬರ ಸಜೀವ ದಹನ

ವಿಜಯಪುರ: ಕಂಟೇನರ್ ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಚಾಲಕರಿಬ್ಬರು ಸಜೀವ ದಹನವಾದ ಘಟನೆ ವಿಜಯಪುರದಲ್ಲಿ ನಡೆದಿದೆ.

ಈ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ಎನ್‍ಎಚ್ 13 ರಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಕಂಟೇನರ್ ನಲ್ಲಿದ್ದ ಕ್ಲೀನರ್ ಒಬ್ಬರು ಪಾರಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಹೊರ್ತಿ ಠಾಣಾ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲದೆ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ಅಪಘಾತದ ಪರಿಣಾಮ ಎನ್‍ಎಚ್ ಸಂಚಾರ ಸಪೂರ್ಣ ಬಂದ್ ಆಗಿದೆ. ಘಟನೆ ಸಂಬಂಧ ಹೊರ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Comments

Leave a Reply

Your email address will not be published. Required fields are marked *