ತಮಿಳ್ನಾಡಿನ ಸೂಳಗಿರಿಯಲ್ಲಿ ಭೀಕರ ಅಪಘಾತ – ಬೆಂಗ್ಳೂರಿನ ವೈದ್ಯ ದಂಪತಿ ಸೇರಿ ಮೂವರ ದುರ್ಮರಣ

ಬೆಂಗಳೂರು: ತಮಿಳುನಾಡಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ವೈದ್ಯ ದಂಪತಿ ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಬೆಂಗಳೂರಿನ ಆರ್.ಟಿ ನಗರ ನಿವಾಸಿಗಳಾದ ಅಂಬುಜಮ್ಮ(50) ಪತಿ ರಾಮಚಂದ್ರ (74) ಹಾಗೂ ಲಾರಿ ಚಾಲಕ ಕುಮಾರ್(30) ಎಂದು ಗುರುತಿಸಲಾಗಿದೆ.

ಕರ್ನಾಟಕ ಗಡಿಗೆ ಹೊಂದಿಕೊಂಡಿರೋ ಹೊಸೂರು ಸಮೀಪದ ಸೂಳಗಿರಿ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಇಂದು ಮುಂಜಾನೆ 3.30 ರ ವೇಳೆಗೆ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೆಂಗಳೂರಿನ ಆರ್.ಟಿ ನಗರ ನಿವಾಸಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ದಂಪತಿಗಳು ವೈದ್ಯರಾಗಿದ್ದು ಆರ್.ಟಿ ನಗರದಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದು, ತಮಿಳುನಾಡಿನ ದೇವಾಲಯಕ್ಕೆ ತೆರಳಿ ವಾಪಸ್ ಬರುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ.

ಮೃತ ದೇಹಗಳನ್ನು ಸುಳಾಗಿರಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು ಸೂಳಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *