ಏಕಮುಖ ರಸ್ತೆಯಲ್ಲಿ ಸರಣಿ ಅಪಘಾತ- ಓರ್ವ ಸಾವು, ಮೂವರಿಗೆ ಗಾಯ!

ಮಂಗಳೂರು: ಏಕಮುಖ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ನಗರದ ಕಣ್ಣೂರು ಮಸೀದಿ ಬಳಿ ನಡೆದಿದೆ.

ಫಾರೂಕ್(26) ಮೃತಪಟ್ಟ ಯುವಕ. ಇವರು ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದು, ಇಂದು ಬೆಳಗಿನ ಜಾವ ಸಂಭವಿಸಿದ ಸರಣಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮಂಗಳವಾರ ತಡರಾತ್ರಿ ಮಳೆ ಸುರಿಯುತ್ತಿದ್ದು, ಅಡ್ಯಾರ್-ಕಣ್ಣೂರು ರಸ್ತೆಯ ಕಣ್ಣೂರು ಮಸೀದಿ ಬಳಿ ಕಾರೊಂದು ಏಕಾಏಕಿ ಹಿಂಬದಿಯಿಂದ ಗುದ್ದಿದೆ. ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ.

ವಾಹನಗಳು ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದವು. ಈ ಅಪಘಾತದ ತೀವ್ರತೆಗೆ ಎರಡು ಕಾರುಗಳು, ಬೈಕ್ ಹಾಗೂ ಆಟೋ ರಿಕ್ಷಾ ಸಂಪೂರ್ಣ ಜಖಂ ಆಗಿದ್ದು, ಗಾಯಗೊಂಡವರು ಹನೀಫ್, ಸಫ್ರಾಝ್ ಹಾಗೂ ತೌಸೀಪ್ ಎಂದು ತಿಳಿದು ಬಂದಿದೆ. ಕಾರು ಚಾಲಕ ಹನೀಫ್ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ಸಂಬಂಧ ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *