ಪ್ರಚಾರಕ್ಕೆ ಬ್ರೇಕ್- ಗಾಯಾಳು ಸ್ನೇಹಿತನನ್ನು ಭೇಟಿ ಮಾಡಿದ್ರು ದರ್ಶನ್

ಬೆಂಗಳೂರು: ನಟ ದರ್ಶನ್ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಪರ ಬಿರುಸಿನಿಂದ ಪ್ರಚಾರ ಮಾಡುತ್ತಿದ್ದಾರೆ. ಈ ಮಧ್ಯೆ ಪ್ರಚಾರಕ್ಕೆ ಸ್ವಲ್ಪ ಬ್ರೇಕ್ ತೆಗೆದುಕೊಂಡು ತಮ್ಮ ಸ್ನೇಹಿತ ವಿನೋದ್ ಪ್ರಭಾಕರ್ ಅವರನ್ನು ಭೇಟಿ ಮಾಡಿದ್ದಾರೆ.

ದರ್ಶನ್ ಅವರು ಮೂರು ದಿನಗಳ ಕಾಲ ಮಂಡ್ಯದಲ್ಲಿ ತಮ್ಮ ಪ್ರಚಾರವನ್ನು ರದ್ದು ಮಾಡಿ ಬೆಂಗಳೂರಿಗೆ ಬಂದಿದ್ದಾರೆ. ಸ್ನೇಹಿತ ವಿನೋದ್ ಪ್ರಭಾಕರ್ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದರು. ಈ ವಿಚಾರ ತಿಳಿದ ದರ್ಶನ್, ತಕ್ಷಣ ಹೋಗಿ ಗೆಳೆಯನ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ವೈದ್ಯರ ಸೂಚನೆಯಂತೆ ವಿಶ್ರಾಂತಿ ಪಡೆಯುವಂತೆ ಸಲಹೆ ಕೊಟ್ಟಿದ್ದಾರೆ.

ನಟ ವಿನೋದ್ ಪ್ರಭಾಕರ್ ಅವರು ‘ವರದ’ ಸಿನಿಮಾದಲ್ಲಿ ಕೆಲವು ಸಾಹಸ ದೃಶ್ಯಗಳ ಶೂಟಿಂಗ್‍ನಲ್ಲಿ ಭಾಗಿಯಾಗಿದ್ದರು. ಈ ವೇಳೆ ಓಡಿ ಬಂದು ಜಂಪ್ ಮಾಡುವಾಗ ಬಿದ್ದು ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಕಾಲಿನ ಮೂಳೆ ಮುರಿದಿದ್ದರಿಂದ 5 ವಾರಗಳ ಕಾಲ ಬೆಡ್‍ರೆಸ್ಟ್ ನಲ್ಲಿ ಇರುವಂತೆ ಸೂಚಿಸಿದ್ದಾರೆ. ಸದ್ಯಕ್ಕೆ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.

ವೈದ್ಯರು ವಿಶಾಂತ್ರಿ ಪಡೆಯುವಂತೆ ಸೂಚಿಸಿದ್ದರೂ ತಮ್ಮಿಂದ ಚಿತ್ರತಂಡಕ್ಕೆ ತೊಂದರೆಯಾಗಬಾರದೆಂದು ಆ್ಯಕ್ಷನ್ ಶೂಟಿಂಗ್ ಬಿಟ್ಟು ಮಾತುಕತೆಯ ಚಿತ್ರೀಕರಣಕ್ಕೆ ಭಾಗಿಯಾಗಿದ್ದರು.

Comments

Leave a Reply

Your email address will not be published. Required fields are marked *