ಶೂಟಿಂಗ್ ವೇಳೆ ಅವಘಡ, ನಟ ಧನ್ವೀರ್ ಗೌಡ ಕೈಗೆ ಪೆಟ್ಟು

ಶೋಕ್ದಾರ್ ಸಿನಿಮಾ ಖ್ಯಾತಿಯ ಧನ್ವೀರ್ ಗೌಡ  ಶೂಟಿಂಗ್ ವೇಳೆ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ. ಶಂಕರ್ ರಾಮನ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ‘ವಾಮನ’ ಸಿನಿಮಾದ ಫೈಟಿಂಗ್ ದೃಶ್ಯಗಳನ್ನು ಬೆಂಗಳೂರಿನ ಯಲಹಂಕದಲ್ಲಿ ಚಿತ್ರೀಕರಿಸಲಾಗುತ್ತಿದೆ. ಈ ವೇಳೆ ಅವಘಡ ಸಂಭವಿಸಿದ್ದು, ರೋಪ್ ನಿಂದ ಕೆಳಗೆ ಬಿದ್ದ ಧನ್ವೀರ್ ಕೈಗೆ ಪೆಟ್ಟಾಗಿದೆ. ತಕ್ಷಣ ಆಸ್ಪತ್ರೆಗೆ ತೆರಳಿ ಧನ್ವೀರ್ ಚಿಕಿತ್ಸೆ ಪಡೆದುಕೊಂಡಿದ್ದಾರೆ .ಇದನ್ನೂ ಓದಿ : ಪ್ಲಾಸ್ಟಿಕ್ ಸುತ್ತಿಕೊಂಡು ಬಂದ ಉರ್ಫಿ ಜಾವೇದ್ : ಕಾಸ್ಟ್ಯೂಮ್ ಡಿಸೈನರ್ ಹುಡುಕುತ್ತಿದ್ದಾರೆ ನೆಟ್ಟಿಗರು

ವಾಮನ ಶೂಟಿಂಗ್ ವೇಳೆ ಆದ ಅನಾಹುತದಿಂದ ಧನ್ವೀರ್ ಗೆ ಬೆರಳುಗಳಿಗೆ ಗಾಯ ಆಗಿದೆ. ಕೈಗೆ ಏಟು ಆಗಿದ್ದರೂ ಸಹ ಧನ್ವೀರ್ ಬ್ರೇಕ್ ಪಡೆದುಕೊಂಡು ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಜಯತೀರ್ಥ ಆಕ್ಷನ್ ಕಟ್ ಹೇಳಿರುವ ಕೈವ ಸಿನಿಮಾದ ಶೂಟಿಂಗ್ ಗೆ ಡೇಟ್ ಫಿಕ್ಸ್ ಆಗಿದೆ. ಹೀಗಾಗಿ ಈ ಚಿತ್ರೀಕರಣಕ್ಕೆ ಯಾವುದೇ ತೊಂದರೆ ಆಗಬಾರದು ಅಂತಾ ಧನ್ವೀರ್ ಏಟಾದರು ವಾಮನ ಚಿತ್ರೀಕರಣ ಮುಂದುವರೆಸಿದ್ದಾರೆ.

Comments

Leave a Reply

Your email address will not be published. Required fields are marked *