ವ್ಯಕ್ತಿಯ ಮೇಲೆ ಹಲ್ಲೆ ಆರೋಪ: ಜೈ ಜಗದೀಶ್ ಪ್ರಕರಣಕ್ಕೆ ಟ್ವಿಸ್ಟ್

ಸ್ಯಾಂಡಲ್‌ವುಡ್ ಹಿರಿಯ ನಟ ಜೈಜಗದೀಶ್ ಅವರು ವ್ಯಕ್ಯಿಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇಂದು ಸ್ವತಃ ಜೈಜಗದೀಶ್ ಠಾಣೆಗೆ ಹಾಜರಾಗಿದ್ದಾರೆ. ಈ ಪ್ರಕರಣ ರಾಜಿಯಲ್ಲಿ ಅಂತ್ಯಗೊಂಡಿದೆ.

ವ್ಯಕ್ಯಿಯೊಬ್ಬರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದದಿಂದ ನಿಂದಿಸಿರುವ ಆರೋಪ ಹಿರಿಯ ನಟ ಜೈಜಗದೀಶ್ ವಿರುದ್ಧ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು. ಜಯರಾಮೇಗೌಡ ಎಂಬುವವರು ದೂರು ದಾಖಲಿಸಿದ್ದರು. ಬಳಿಕ ದೂರಿನನ್ವಯ ಪೊಲೀಸರು ಎಫ್‌ಐಆರ್ ದಾಖಲು ಮಾಡಿಕೊಂಡಿದ್ದರು. ಆ ಹಿನ್ನೆಲೆಯಲ್ಲಿ ಇಂದು ನಟ ಜೈಜಗದೀಶ್ ಬೆಳ್ಳೂರು ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಜೊತೆಗೆ ಈ ಪ್ರಕರಣವನ್ನು ರಾಜಿ ಮಾಡಲಾಗಿದೆ. ಇದನ್ನೂ ಓದಿ:ತೆಲಂಗಾಣದ ಸೆಲೆಬ್ರಿಟಿ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಅನುಮಾನಾಸ್ಪದ ಸಾವು

ಈ ವೇಳೆ ಮಾಧ್ಯಮಗಳ ಎದುರು ಮಾತನಾಡಿದ ಜೈ ಜಗದೀಶ್, ಘಟನೆಯಲ್ಲಿ ಯಾವುದೇ ರೀತಿ ಹಲ್ಲೆ ನಡೆದಿಲ್ಲ. ಕಳೆದ ಭಾನುವಾರ (ಜೂ.5)ರಂದು ನನ್ನ ಮತ್ತು ಚಂದ್ರು ನಡುವೆ ಸಣ್ಣ ಭಿನ್ನಾಭಿಪ್ರಾಯ ಆಗಿತ್ತು. ಅಂದು ನಾನು ಕಾರಿನಲ್ಲಿ ಹೋಗುವಾಗ ಬಸ್ಸಿನಿಂದ ಅವರು ನೀರಿನ ಬಾಟಲಿಯನ್ನು ಎಸೆದಿದ್ದರು. ಅದಕ್ಕೆ ಪ್ರಶ್ನೆ ಮಾಡಿದ್ದು ಬಿಟ್ಟರೆ ಯಾವುದೇ ರೀತಿಯ ಹಲ್ಲೆ ಮಾಡಿರಲಿಲ್ಲ. ಆ ಬಗ್ಗೆ ಇಂದು ಕುಳಿತ ಮಾತುಕತೆ ನಡೆಸಿ, ಬಗೆಹರಿಸಿಕೊಂಡಿದ್ದೇವೆ. ಅಂದು ಯಾವುದೇ ಗಲಾಟೆಯಾಗಿರಲಿಲ್ಲ, ಸಣ್ಣ ಭಿನ್ನಾಭಿಪ್ರಾಯ ಆಗಿತ್ತು ಅಷ್ಟೇ ಎಂದು ಜೈಜಗದೀಶ್ ಸ್ಪಷ್ಟನೆ ನೀಡಿದ್ದಾರೆ.

Comments

Leave a Reply

Your email address will not be published. Required fields are marked *