#MeToo ಅಭಿಯಾನದಲ್ಲಿ ಮಾನ್ವಿತಾ ಹುಡುಗರ ಪರ ಬ್ಯಾಟಿಂಗ್

ಬೆಂಗಳೂರು: ಬಾಲಿವುಡ್‍ನಿಂದ ಹಿಡಿದು ಸ್ಯಾಂಡಲ್‍ವುಡ್ ವರೆಗೂ `ಮಿ ಟೂ’ದೇ ಸಿಕ್ಕಾ ಪಟ್ಟೆ ಸದ್ದು, ಈಗ ಇದೇ ಟಾಪಿಕ್ ಬಗ್ಗೆ ಚಂದನವನದ ಟಗರು ಪುಟ್ಟಿ ಮಾನ್ವಿತಾ ಖಡಕ್ ಆಗಿ ಮಾತನಾಡಿದ್ದಾರೆ.

ಕೆಂಡಸಂಪಿಗೆ ಬೆಡಗಿ ಮಾನ್ವಿತಾ ಅವರು ಸಿನಿರಂಗದಲ್ಲಿ ನಡೆಯುತ್ತಿದ್ದ ‘ಮಿ ಟೂ’ ಬಗ್ಗೆ `ತಾರಕಾಸುರ’ ಸಿನಿಮಾದ ಆಡಿಯೋ ಲಾಂಚ್ ನಲ್ಲಿ ಮಾತನಾಡಿದ್ದಾರೆ. ಹುಡುಗ ನೋಡಿದ ತಕ್ಷಣ, ರೇಗಿಸಿದ ತಕ್ಷಣ ಅದನ್ನು ಲೈಂಗಿಕ ಕಿರುಕುಳ ಅಂತ ಹೇಳಬೇಡಿ. ಕೆಲವರು ಸುಮ್ಮನೆ ಪ್ರಚಾರಕ್ಕೋಸರ ಆರೋಪ ಮಾಡಬಾರದು ಎಂದು ಹುಡುಗಿಯರ ಬಳಿ ಮನವಿ ಮಾಡಿಕೊಂಡಿದ್ದಾರೆ.

ನಾನು ಹೃದಯ ಪೂರ್ವಕವಾಗಿ ಹೇಳುತ್ತೇನೆ. ನೊಂದ ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಬೇಕು. ತಪ್ಪು ಮಾಡಿದ ಗಂಡು ಮಕ್ಕಳಿಗೆ ಶಿಕ್ಷೆ ಆಗಬೇಕು. ಆದರೆ ಗಂಡಸರ ಬಗ್ಗೆ ಯಾರೂ ಸುಮ್ಮಸುಮ್ಮನೆ ಆರೋಪ ಮಾಡಬಾರದು ಎಂದು ಮಾನ್ವಿತಾ ಅವರು ಹೇಳಿದ್ದಾರೆ.

ಸದ್ಯಕ್ಕೆ ಮಾನ್ವಿತಾ ನಟಿಯಾಗಿ ‘ತಾರಕಾಸುರ’ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ ಸಂಗೀತ ನಿರ್ದೇಶಕ ಧರ್ಮ ವಿಶ್ ಮತ್ತು ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಕಾಂಬಿನೇಷನ್‍ನ ಮೂಡಿ ಬರುತ್ತಿರುವ ಮೂರನೇ ಸಿನಿಮಾ ಇದಾಗಿದೆ. ರಥಾವರ ಸಿನಿಮಾದಲ್ಲಿ `ಹುಡುಗಿ ಕಣ್ಣು ಲೋಡೆಡ್ ಗನ್ನು’ ಹಾಡಿನ ಈ ಜೋಡಿ ಮತ್ತೆ ಮೋಡಿ ಮಾಡುವುದಕ್ಕೆ ನಾಲ್ಕು ಹಾಡುಗಳನ್ನ ರೆಡಿ ಮಾಡಿಕೊಂಡಿದೆ.

ವಿ. ನಾಗೇಂದ್ರ ಪ್ರಸಾದ್, ಬಹುದ್ಧೂರ್ ಚೇತನ್, ನಾಗತಿಹಳ್ಳಿ ಚಂದ್ರ ಶೇಖರ್, ಕವಿರಾಜ್ ತಾರಕಾಸುರನಿಗೆ ಸಾಹಿತ್ಯ ಬರೆದಿದ್ದಾರೆ. ಈಗಾಗಲೇ ಶಿವಣ್ಣ ಹಾಡಿರುವ ಕನ್ನಡ ಕಲಿಯೋ ಸಾಂಗ್ ಯುಟ್ಯೂಬ್‍ನಲ್ಲಿ ಒಳ್ಳೆ ಸೌಂಡ್ ಮಾಡುತ್ತಿದೆ. ಈಗ ಸಾಧು ಕೋಕಿಲಾ ಕಂಠಸಿರಿಯಲ್ಲಿ ಮೂಡಿ ಬಂದಿರುವ ಮತ್ತೊಂದು ಹಾಡು ಸದ್ದು ಮಾಡುವ ಕ್ಲೂ ಕೊಟ್ಟಿದೆ. ಇನ್ನು ನವೀನ್ ಸಜ್ಜು ಮತ್ತು ಕೈಲಾಶ್ ಖೇರ್ ಕೂಡ ಅಷ್ಟೇ ಖಡಕ್ ಆಗಿ ಹಾಡಿದ್ದಾರೆ.

ಅಳಿವಿನ ಅಂಚಿನಲ್ಲಿರುವ ಒಂದು ಜನಪದ ಕಲೆಗೆ ಸಿನಿಮಾ ಟಚ್ ಕೊಟ್ಟು ಥೇಟರ್ ಗೆ ಎಂಟ್ರಿ ಕೊಡುವುದಕ್ಕೆ ‘ತಾರಕಾಸುರ’ ಸಿನಿಮಾ ರೆಡಿಯಾಗಿದೆ. ಹಾಲಿವುಡ್‍ನ ಡ್ಯಾನಿ ಕೂಡ ಈ ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುತ್ತಿರುವುದು ಮತ್ತೊಂದು ಸ್ಪೆಷಲ್ ಆಗಿದೆ. ಸದ್ಯದಲ್ಲೇ ಟ್ರೇಲರ್ ಕೂಡ ರಿಲೀಸ್ ಮಾಡುವ ಪ್ಲಾನ್‍ ನಲ್ಲಿ ಚಿತ್ರತಂಡ ಇದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *