ಕೊನೆಗೂ ಪ್ರಚಾರಕ್ಕಿಳಿದ ಕುರುಕ್ಷೇತ್ರದ ಅಭಿಮನ್ಯು- ತಂದೆಯ ಹಾದಿಯಲ್ಲಿಯೇ ಹೆಜ್ಜೆ ಇಡುತ್ತೇನೆ ಅಂದ್ರು ನಿಖಿಲ್

ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನ ಸ್ಟಾರ್ ಕ್ಯಾಂಪೇನರ್ ಹಾಗೂ ಎಚ್.ಡಿ ಕುಮಾರಸ್ವಾಮಿ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ತಮ್ಮ ತಂದೆ ಪರ ಮತಯಾಚನೆ ನಡೆಸಿದ್ದಾರೆ.

ರಾಮನಗರ ತಾಲೂಕಿನ ಮಾಯಗಾನಹಳ್ಳಿಯಿಂದ ಪ್ರಚಾರ ಆರಂಭಿಸಿರುವ ನಿಖಿಲ್, ತಮ್ಮ ತಂದೆಯ ಪರ ಮತಯಾಚನೆ ಮಾಡಿದ್ದಾರೆ. ಪ್ರತಿ ಗ್ರಾಮಗಳಿಗೆ ತೆರಳಿದ ನಿಖಿಲ್‍ಗೆ ಅಭೂತಪೂರ್ವ ಸ್ವಾಗತ ಸಹ ಸಿಕ್ಕಿದ್ದು, ಅವರಿಗೆ ಆರತಿ ಎತ್ತಿ ಮಹಿಳೆಯರು ಸ್ವಾಗತ ಮಾಡಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ಸಮಯದ ಅಭಾವದಿಂದ ತಮ್ಮ ತಂದೆಯವರು ಬರಲಾಗುತ್ತಿಲ್ಲ. ನಾನು ಕೂಡಾ ಸಾಮಾನ್ಯ ಕಾರ್ಯಕರ್ತನಂತೆ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕೂಡ ತಂದೆಯವರ ಪರ ಪ್ರಚಾರ ನಡೆಸಿ ಮತಯಾಚನೆ ನಡೆಸುತ್ತೇನೆ. ಎರಡೂ ಕ್ಷೇತ್ರಗಳಲ್ಲಿ ತಂದೆಯವರು ಗೆಲುವು ಸಾಧಿಸಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿಯವರು ತಿಳಿಸಿದ್ದಾರೆ.

ನಮ್ಮದು ರಾಜಕೀಯ ಕುಟುಂಬ, ರಾಜಕೀಯ ವಾತಾವರಣದಲ್ಲೇ ಬೆಳೆದವನು. ನನಗೆ ನಮ್ಮ ತಂದೆಯೇ ಮೊದಲ ಸ್ಪೂರ್ತಿಯಾಗಿದ್ದು, ಅವರ ಹಾದಿಯಲ್ಲಿಯೇ ನಡೆಯಲಿದ್ದೇನೆ. ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಆಲೋಚನೆ ಇಲ್ಲವೆಂದು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *