ಕೃಷ್ಣ ಮೃಗ ಬೇಟೆ ಪ್ರಕರಣ-ಸಲ್ಮಾನ್ ಗೆ ಐದು ವರ್ಷ ಜೈಲು

ನವದೆಹಲಿ: ಎರಡು ದಶಕಗಳ ಹಿಂದಿನ ಕೃಷ್ಣ ಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ದಂಡವನ್ನು ವಿಧಿಸಿ ಜೋಧಪುರ ಸಿಜೆಎಂ ಕೋರ್ಟ್ ಶಿಕ್ಷೆ ತೀರ್ಪು ನೀಡಿದೆ.

ಸರ್ಕಾರಿ ವಕೀಲರು ಕನಿಷ್ಠ ಆರು ವರ್ಷಗಳ ಶಿಕ್ಷೆ ನೀಡಬೇಕೆಂದು ಅಂತಾ ತಮ್ಮ ವಾದವನ್ನು ಮಂಡಿಸಿದ್ದರು. ಆದ್ರೆ ಸಲ್ಮಾನ್ ಪರ ವಕೀಲರು ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಿಸುವಂತೆ ಮನವಿ ಮಾಡಿಕೊಂಡಿದ್ದರು. ಸದ್ಯ ನ್ಯಾಯಾಲಯದ ಶಿಕ್ಷೆಯನ್ನು ಕೆಲವು ದಿನಗಳವರೆಗೆ ಅಮಾನತಿನಲ್ಲಿಡಿ ಸಲ್ಮಾನ್ ಪರ ವಕೀಲರು ಮನವಿ ಮಾಡಿಕೊಳ್ಳುವ ಸಾಧ್ಯತೆಗಳಿವೆ. ಪ್ರಕರಣದ ಇತರೆ ಆರೋಪಿಗಳಾದ ಸೈಫ್ ಅಲಿಖಾನ್, ಟಬು, ನೀಲಂ, ಸೋನಾಲಿ ಅವರನ್ನು ನಿರ್ದೋಷಿಗಳೆಂದು ಕೋರ್ಟ್ ಅದೇಶಿಸಿದೆ.

 

ಬೇಟೆಯಾಡುವ ವೇಳೆ ಪ್ರವಾಸಿ ಗೈಡ್ ಗಳಾದ ದುಶ್ಯಂತ್ ಸಿಂಗ್ ಮತ್ತು ಸಲ್ಮಾನ್ ಸಹಾಯಕ ದಿನೇಶ್ ಗೌರೆ ಸಹ ಸಲ್ಮಾನ್ ಜೊತೆಯಲ್ಲಿದ್ದರು. ಅಂದು ಸಲ್ಮಾನ್ ಜೊತೆಯಲ್ಲಿದ್ದ ಸಹಾಯಕ ಇಲ್ಲಿಯವರೆಗೆ ಎಲ್ಲಿದ್ದಾನೆ ಎನ್ನುವುದು ಪತ್ತೆಯಾಗಿಲ್ಲ.

ಕೃಷ್ಣಮೃಗ ಬೇಟೆ ಪ್ರಕರಣ ನಡೆದು ಬಂದ ದಾರಿ:
* ಸೆಪ್ಟೆಂಬರ್ 26, 1998 – ಕೃಷ್ಣಮೃಗ ಬೇಟೆಯಾಡಿದ್ದ ಸಲ್ಮಾನ್
* ಅಕ್ಟೋಬರ್ 2, 1998 – ಕೇಸ್ ದಾಖಲಿಸಿದ್ದ ಅರಣ್ಯಾಧಿಕಾರಿಗಳು
* 7 ಜನ ಆರೋಪಿಗಳು – ಸಲ್ಮಾನ್ ಖಾನ್, ಸೈಫ್ ಅಲಿಖಾನ್, ಸೋನಾಲಿ ಬೇಂದ್ರೆ, ಟಬು, ನೀಲಂ ಕೋಠಾರಿ, ದುಶ್ಯಂತ್ ಸಿಂಗ್, ದಿನೇಶ್ ಗಾವ್ರೆ
* 4 ಜನ ಪ್ರತ್ಯಕ್ಷದರ್ಶಿಗಳು – ಛೋಗರಾಮ್, ಮೂನಂ ಚಂದ್, ಶಿರಾರಾಮ್, ಮಂಗಿಲಾಲ್
* ನವೆಂಬರ್ 9,2000 – ಸಿಜೆಎಂ ಕೋರ್ಟ್‍ನಿಂದ ಕೇಸ್
* ಫೆಬ್ರವರಿ 19, 2016 – ಆರೋಪಿಗಳ ಮೇಲೆ ಚಾರ್ಜ್‍ಶೀಟ್
* 7 ವರ್ಷಗಳ ಕಾಲ ಸುದೀರ್ಘವಾಗಿ ನಡೆದ ವಿಚಾರಣೆ
* ಮಾರ್ಚ್ 23, 2013 – ಎಲ್ಲಾ ಆರೋಪಿಗಳ ಮೇಲೆ ಮತ್ತೆ ಹೊಸದಾಗಿ ಚಾರ್ಚ್‍ಶೀಟ್
* ಮೇ, 23, 2013 – ವಿಚಾರಣೆ ಆರಂಭಿಸಿದ ಸಿಜೆಎಂ ಕೋರ್ಟ್, 28 ಸಾಕ್ಷಿಗಳ ಹೇಳಿಕೆ ದಾಖಲು
* ಜನವರಿ 13, 2017 – ಪ್ರಕರಣದ ಮಾಹಿತಿ ಪೂರ್ಣ
* ಜನವರಿ 17,2017 – ಕೋರ್ಟ್ ಮುಂದೆ ಎಲ್ಲಾ ಆರೋಪಿಗಳು ಹಾಜರು
* ಸೆಪ್ಟೆಂಬರ್ 13, 2017 – ಪ್ರಾಸಿಕ್ಯೂಷನ್‍ನಿಂದ ಅಂತಿಮ ವಾದ
* ಅಕ್ಟೋಬರ್ 28, 2017 – ಡಿಫೆನ್ಸ್ ಲಾಯರ್ ಅಂತಿಮ ವಾದ
* ಮಾರ್ಚ್, 24, 2018 – ವಾದ-ಪ್ರತಿವಾದ ಪೂರ್ಣ
* ಮಾರ್ಚ್ 28, 2018 – ಅಂತಿಮ ತೀರ್ಪು ಕಾಯ್ದಿಟ್ಟ ಸಿಜೆಎಂ ಕೋರ್ಟ್
* ಏಪ್ರಿಲ್ 5, 2018 – ತೀರ್ಪು ಪ್ರಕಟಿಸಿದ ಕೋರ್ಟ್, ಸಲ್ಮಾನ್ ದೋಷಿ, ಇತರರ ಖುಲಾಸೆ

Comments

Leave a Reply

Your email address will not be published. Required fields are marked *