ರಾಜಕೀಯ ಪ್ರವೇಶದ ಕುರಿತು ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿದ ಹ್ಯಾಟ್ರಿಕ್ ಹೀರೋ

ದಾವಣಗೆರೆ: ನಾನು ರಾಜಕೀಯಕ್ಕೆ ಬರೋದಿಲ್ಲ ಮತ್ತು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ನನ್ನ ಪತ್ನಿ ಗೀತಾ ಶಿವರಾಜ್‍ಕುಮಾರ್ ಮಾತ್ರ ರಾಜಕೀಯದಲ್ಲಿ ಇರುತ್ತಾರೆ ಎಂದು ಶಿವರಾಜ್‍ಕುಮಾರ್ ಸ್ಪಷ್ಟಣೆ ನೀಡಿದ್ದಾರೆ.

ಟಗರು ಸಿನಿಮಾದ ವಿಜಯೋತ್ಸವದಲ್ಲಿ ಭಾಗಿಯಾದ ಶಿವರಾಜ್‍ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯಕ್ಕೆ ನಾನು ಸ್ವಾಗತ ಮಾಡುತ್ತೇನೆ. ಉಪೇಂದ್ರ ಯಾವಾಗಲೂ ಸಮಾಜದಲ್ಲಿ ಬದಲಾವಣೆ ತರಬೇಕು ಎಂಬುದರ ಬಗ್ಗೆ ಚಿಂತಿಸುತ್ತಿರುತ್ತಾರೆ. ನಾನು ಯಾವಾಗಲೂ ಉಪೇಂದ್ರ ಅವರಿಗೆ ಬೆಂಬಲ ನೀಡುತ್ತೇನೆ ಅಂತಾ ಅಂದ್ರು. ಇದನ್ನೂ ಓದಿ: ಗೀತಾ ಶಿವರಾಜ್‍ಕುಮಾರ್ ಚುನಾವಣೆಗೆ ಸ್ಪರ್ಧಿಸ್ತಾರಾ?- ಸಹೋದರ ಮಧು ಬಂಗಾರಪ್ಪ ಹೇಳಿದ್ದು ಹೀಗೆ

ಟಗರು ಸಿನಿಮಾ ವಿಜಯೋತ್ಸವದ ಹಿನ್ನೆಲೆಯಲ್ಲಿ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದಿಂದ ಅಶೋಕ ಚಿತ್ರಮಂದಿರದ ವರೆಗೂ ಮೆರವಣಿಗೆ ಮಾಡಲಾಯ್ತು. ನಗರಕ್ಕೆ ಆಗಮಿಸಿದ್ದ ಶಿವರಾಜ್‍ಕುಮಾರ್ ರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಚಿತ್ರಮಂದಿರದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರಿಂದ ನೂಕು ನುಗ್ಗಲು ಸಹ ಉಂಟಾಯಿತು. ಪೊಲೀಸರು ಅಭಿಮಾನಿಗಳ ನ್ನು ನಿಯಂತ್ರಿಸಲು ಲಘು ಲಾಠಿ ಚಾರ್ಜ್ ಕೂಡ ನಡೆಸಿದ್ರು.

Comments

Leave a Reply

Your email address will not be published. Required fields are marked *