ಉಪೇಂದ್ರ ಆರೋಗ್ಯದಲ್ಲಿ ಏರುಪೇರು: ಹರ್ಷ ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್

ಟ, ನಿರ್ದೇಶಕ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನೆಲಮಂಗಲ ಹತ್ತಿರದ ಹರ್ಷಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ‘ಯುಐ’ ಚಿತ್ರೀಕರಣದಲ್ಲಿ ತೊಡಗಿದ್ದ ಉಪೇಂದ್ರ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದು ಕ್ಷಣ ಆತಂಕದ ವಾತಾವರಣವೇ ಅಲ್ಲಿ ಉಂಟಾಗಿತ್ತು.

ನೆಲಮಂಗಲದ ಮೋಹನ್ ಬಿ ಕೆರೆ ಸ್ಡುಡಿಯೋದಲ್ಲಿ ನಡೆಯುತ್ತಿದ್ದ ‘ಯುಐ ‘ ಚಿತ್ರೀಕರಣದಲ್ಲಿ ಸ್ಮೋಕ್ ಎಫೆಕ್ಟ್ ನಲ್ಲಿ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತಿತ್ತು. ದಟ್ಟ ಹೊಗೆಯಲ್ಲಿ ಚಿತ್ರೀಕರಣದ ನಡೆಯುತ್ತಿರೋದ್ರಿಂದ ಕೆಮ್ಮು ತೀವ್ರವಾಗಿ‌ ಉಸಿರಾಟದ ಸಮಸ್ಯೆ ಎದುರಾಗಿತ್ತು ಎಂದು ಹೇಳಲಾಗುತ್ತಿದೆ. ಈ ವೇಳೆ ಮುಂಜಾಗ್ರತಾ ಕ್ರಮವಾಗಿ ಹತ್ತಿರದಲ್ಲೇ ಇರುವ ಹರ್ಷ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದನ್ನೂ ಓದಿ: ಸಕ್ಸಸ್‌ ಸಂಭ್ರಮದಲ್ಲಿ ʻಕಾಂತಾರʼ ಸಿನಿಮಾ ತಂಡ

ಚಿಕಿತ್ಸೆ ಕೊಡಿಸಿದ ಬಳಿಕ ಉಪೇಂದ್ರ ಸುಧಾರಿಸಿಕೊಂಡಿದ್ದು, ಕೆಲ ಹೊತ್ತು ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದಿದ್ದಾರೆ. ನಂತರ ಮತ್ತೆ ಶೂಟಿಂಗ್ ಸ್ಥಳಕ್ಕೆ ಬಂದು, ಎಂದಿನಂತೆ ಕೆಲಸದಲ್ಲಿ ತೊಡಗಿದ್ದಾರೆ. ಚಿತ್ರೀಕರಣದ ಸ್ಥಳದಿಂದಲೇ ಫೇಸ್ ಬುಕ್ ಲೈವ್‍ಗೆ ಬಂದ ಉಪೇಂದ್ರ, ‘ನಾನು ಶೂಟಿಂಗ್ ಸ್ಪಾಟ್‍ ನಲ್ಲಿ ಇದ್ದೇನೆ. ಆರೋಗ್ಯವಾಗಿದ್ದೇನೆ. ಯಾರೂ ಆತಂಕ ಪಡಬೇಕಿಲ್ಲ. ಇದೀಗ ಚಿತ್ರೀಕರಣದಲ್ಲಿ ಮತ್ತೆ ತೊಡಗಿಕೊಂಡಿದ್ದೇನೆ’ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *