ಬೆಂಕಿಗೆ ತುಪ್ಪ ಸುರಿಯೋ ಕೆಲಸ ನಾನು ಮಾಡಲ್ಲ: ಚೇತನ್‌ಗೆ ಉಪೇಂದ್ರ ಟಾಂಗ್

ಲ್ಲಾಪೆಟ್ಟಿಗೆಯಲ್ಲಿ `ಕಾಂತಾರ'(Kantara Film) ಸೂಪರ್ ಸಕ್ಸಸ್ ಕಂಡಿದೆ. ಈ ಬೆನ್ನಲ್ಲೇ ವಿವಾದ ಕೂಡ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಭೂತಕೋಲವು ಹಿಂದೂ ಸಂಸ್ಕೃತಿಯೇ ಅಲ್ಲ ಎಂದು  ಚೇತನ್ ವಿರೋಧ ವ್ಯಕ್ತಪಡಿಸಿದ್ದಾರೆ. ಇದೀಗ ನಟ ಚೇತನ್(Chethan) ಹೇಳಿಕೆಗೆ ರಿಯಲ್ ಸ್ಟಾರ್ ಉಪೇಂದ್ರ(Upendra) ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಸಾಲು ಸಾಲು ಸಿನಿಮಾಗಳ ಶೂಟಿಂಗ್‌ನಲ್ಲಿ ಬ್ಯುಸಿಯಿರುವ ನಟ ಉಪೇಂದ್ರ ಇದೀಗ `ಕಾಂತಾರ’ ಚಿತ್ರದ ಬಗ್ಗೆ ಹಾಗೂ ನಟ ಚೇತನ್ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. `ಕಾಂತಾರ'(Kantara) ಸಿನಿಮಾ ನೋಡಿಲ್ಲ. ಚಿತ್ರ ನೋಡಿ ರಿಯಾಕ್ಟ್ ಮಾಡ್ತೀನಿ. ಎಲ್ಲರೂ ಸಿನಿಮಾದ ಬಗ್ಗೆ ಒಳ್ಳೆಯ ಅಭಿಪ್ರಾಯ ಹೇಳಿದ್ದಾರೆ.

ನಿನ್ನೆ ಘಟನೆಯ ಬಗ್ಗೆ ನಾನು ಏನೂ ಹೇಳಲ್ಲ. ಈ ತರದ ಬೆಳವಣಿಗೆ ಅಸಹ್ಯ ಅನಿಸುತ್ತಿದೆ. ಬೆಂಕಿಗೆ ತುಪ್ಪ ಸುರಿಯೋ ಕೆಲಸ ನಾನು ಮಾಡಲ್ಲ. ಭೂತಾರಾಧನೆ ಅದು ಅವರವರ ವೈಯಕ್ತಿಕ ನಂಬಿಕೆ. ನಾನು ಅದೇ ಊರಿನಿಂದ ಬಂದವನು, ನನಗೆ ವಿಶೇಷವಾದ ನಂಬಿಕೆ ಇದೆ ಜೊತೆಗೆ ನನ್ನ ತಂದೆ ಇವತ್ತಿಗೂ ನಾಗರಾದನೆಯನ್ನೂ ಮಾಡಿಕೊಂಡು ಬರುತ್ತಿದ್ದಾರೆ ಎಂದು ಚೇತನ್ ಹೇಳಿಕೆಗೆ ಉಪೇಂದ್ರ ಪ್ರತಿಕ್ರಿಯೆ ಮಾಡಿದ್ದಾರೆ. ಇದನ್ನೂ ಓದಿ: ರಿಷಬ್ ಹೇಳಿದ ಹಿಂದೂ ಪದ ಒಪ್ಪಲ್ಲ, ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ: ಸಮರ್ಥಿಸಿದ ಚೇತನ್

ಬೆಂಕಿಗೆ ತುಪ್ಪ ಸುರಿಯೋ ಕೆಲಸ ನಾನು ಮಾಡಲ್ಲ ಎಂಬ ಹೇಳಿಕೆಯ ಮೂಲಕ ನಟ ಉಪೇಂದ್ರ ಚೇತನ್‌ಗೆ ಟಾಂಗ್‌ ಕೊಟ್ಟಿದ್ದಾರೆ. ಇನ್ನೂ `ಕಾಂತಾರ’ ಸಿನಿಮಾ ಎಲ್ಲೆಡೆ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸೌತ್‌ನಲ್ಲೂ ಸಿನಿಮಾ ಕೋಟಿ ಕೋಟಿ ಲೂಟಿ ಮಾಡುತ್ತಿದೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *