ಅವಳಿ ಮಕ್ಕಳೊಂದಿಗೆ ಅಣ್ಣಮ್ಮ ದೇವಸ್ಥಾನಕ್ಕೆ ನಟಿ ಅಮೂಲ್ಯ ಭೇಟಿ

ಸ್ಯಾಂಡಲ್‌ವುಡ್ ಗೋಲ್ಡನ್ ಕ್ವೀನ್ ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಮೂರು ತಿಂಗಳು ಸಮೀಪಿಸುತ್ತಿದೆ ಎಂದು ಬೆಂಗಳೂರಿನ ಅಣ್ಣಮ್ಮ ದೇಗುಲಕ್ಕೆ ಭೇಟಿ ನೀಡಿ, ದೇವಿದೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

`ಚೆಲುವಿನ ಚಿತ್ತಾರ’ ಚಿತ್ರದ ಮೂಲಕ ನಾಯಕಿಯಾಗಿ ಜನಮನಗೆದ್ದ ನಟಿ ಅಮೂಲ್ಯ, ಸಾಕಷ್ಟು ಚಿತ್ರಗಳ ಮೂಲಕ ಸ್ಟಾರ್‌ಗಳ ಜತೆ ನಟಿಸಿ ಸೈ ಎನಿಸಿಕೊಂಡವರು. ಬೇಡಿಕೆ ಇರುವಾಗಲೇ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡು ಮದುವೆ ಸಂಸಾರ ಅಂತಾ ಬ್ಯುಸಿಯಾಗಿ ಬಿಟ್ಟರು. ಇದೀಗ ಪತಿ ಜಗದೀಶ್ ಚಂದ್ರ ಮತ್ತು ಅವಳಿ ಗಂಡು ಮಕ್ಕಳೊಂದಿಗೆ ಅಣ್ಣಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ರಜನಿಕಾಂತ್ ನನ್ನ ವೈರಿಯಲ್ಲ ಎಂದ ಕಮಲ್ ಹಾಸನ್

ಇಂದು ನಮ್ಮ ಮಕ್ಕಳಿಗೆ ಮೂರು ತಿಂಗಳು ಸಮೀಪಿಸುತ್ತಿರುವ ಶುಭ ಸಂದರ್ಭದಲ್ಲಿ, ಗಾಂಧಿನಗರದ ಮೆಜೆಸ್ಟಿಕ್‌ನಲ್ಲಿರುವ ನಗರ ದೇವತೆ, ಬೆಂಗಳೂರು ತಾಯಿ ಶ್ರೀ ಅಣ್ಣಮ್ಮ ದೇವಿಯ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ, ಪೂಜೆ ಸಲ್ಲಿಸಿ ದೇವಿಯ ಆರ್ಶೀವಾದ ಪಡೆಯಲಾಯಿತು ಎಂದು ನಟಿ ಅಮೂಲ್ಯ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *