ಚುನಾವಣೆಯಲ್ಲಿ ಗೆದ್ದ ಬಾಲಯ್ಯಗೆ ಕಾಜಲ್ ವಿಶ್

ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು 3ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಟಿಡಿಪಿ ಅಭ್ಯರ್ಥಿಯಾಗಿ ಹಿಂದೂಪುರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಬಾಲಯ್ಯ ಅವರು ವೈಎಸ್‌ಆರ್‌ಸಿಯ ದೀಪಿಕಾ ವಿರುದ್ಧ 31,602 ಅಂತರಗಳಿಂದ ಗೆದ್ದಿದ್ದಾರೆ. ಬಾಲಯ್ಯ ಗೆಲುವಿಗೆ ತೆಲುಗಿನ ಸ್ಟಾರ್ಸ್ ಅಭಿನಂದನೆ ತಿಳಿಸಿದ್ದಾರೆ. ಈಗ ಚುನಾವಣೆಯಲ್ಲಿ ಗೆದ್ದ ಬಾಲಯ್ಯಗೆ ಕಾಜಲ್ ಅಗರ್ವಾಲ್ (Kajal Aggarwal)‌ ಕೂಡ ವಿಶ್ ಮಾಡಿದ್ದಾರೆ. ಇದನ್ನೂ ಓದಿ: ಸುದೀಪ್‌ಗೂ ಮುನ್ನ ಶಿವಣ್ಣಗೆ ‘ಸಪ್ತಸಾಗರದಾಚೆ ಎಲ್ಲೋ’ ನಿರ್ದೇಶಕ ಆ್ಯಕ್ಷನ್ ಕಟ್

ಬಾಲಯ್ಯ ಅವರೇ ನಿಮ್ಮ ಅಮೋಘ ಯಶಸ್ಸಿಗೆ ಧನ್ಯವಾದಗಳು. ನಿಮ್ಮ ಪರಿಶ್ರಮ, ಬದ್ಧತೆ, ದೂರದೃಷ್ಟಿಯ ಕಾರಣದಿಂದಾಗಿ ನಿಮಗೆ ಜನರಿಂದ ಈ ಪರಿ ಪ್ರೀತಿ ಸಿಕ್ಕಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಾಜಲ್ ಶುಭಕೋರಿದ್ದಾರೆ. ನಟಿಯ ಪೋಸ್ಟ್‌ಗೆ ಬಾಲಯ್ಯ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ರೆ, ಇನ್ನೂ ಕೆಲವರು ಕಟುವಾಗಿ ಟೀಕೆ ಮಾಡಿದ್ದಾರೆ.

ಇತ್ತೀಚೆಗೆ ಬಾಲಯ್ಯ ಅವರು ಭಾರೀ ಸುದ್ದಿಯಲ್ಲಿದ್ದಾರೆ. ಸಿನಿಮಾ ಸಮಾರಂಭವೊಂದರಲ್ಲಿ ನಟಿ ಅಂಜಲಿರನ್ನು ಬಾಲಯ್ಯ ತಳ್ಳಿದ್ದರು. ಈ ವಿಚಾರಕ್ಕೆ ಬಾಲಯ್ಯಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ ಅಂಜಲಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಸಿನಿಮಾ ಕಾರ್ಯಕ್ರಮಕ್ಕೆ ಬಂದು ಬೆಂಬಲ ನೀಡಿದಕ್ಕೆ ಥ್ಯಾಂಕ್ಯೂ ಹೇಳಿ ವಿವಾದಕ್ಕೆ ತೆರೆ ಎಳೆದಿದ್ದರು.