ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಕಾವ್ಯ ಶಾ-ನಿರ್ಮಾಪಕ ವರುಣ್

ಸ್ಯಾಂಡಲ್‌ವುಡ್ ನಟಿ ಕಾವ್ಯ ಶಾ ಕೊನೆಗೂ ಹಸೆಮಣೆ ಏರಿದ್ದಾರೆ. ಇಂದು ಗುರುಹಿರಿಯರ ಸಮ್ಮುಖದಲ್ಲಿ ಕಾವ್ಯ ಶಾ ಮತ್ತು ವರುಣ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾವಿ ಪತಿ ತಂದೆಯ ಅಕಾಲಿಕ ಮರಣದಿಂದ ಮದುವೆಯನ್ನು ಮುಂದೂಡಲಾಗಿತ್ತು. ಇದೀಗ ಈ ಜೋಡಿ ಹಸೆಮಣೆ ಏರಿದ್ದಾರೆ.

ಕಿರುತೆರೆ ಮತ್ತು ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದ ಕಾವ್ಯ ಶಾ ಎರಡು ಬಾರಿ ಮದುವೆ ಮುಂದೂಡಲಾಗಿತ್ತು. ಇಂದು ಕಾವ್ಯ ಮತ್ತು ನಿರ್ಮಾಪಕ ವರುಣ್ ಹಸೆಮಣೆ ಏರಿದ್ದಾರೆ. ಪುನೀತ್ ರಾಜ್‌ಕುಮಾರ್ ಜತೆ ಒಳ್ಳೆಯ ಒಡನಾಟ ಹೊಂದಿದ್ದ ವರುಣ್, ಪುನೀತ್ ಅಕಾಲಿಕ ನಿಧನದ ನಿಮಿತ್ತ ಮದುವೆ ಮುಂದೂಡಲಾಗಿತ್ತು. ಬಳಿಕ ಏಪ್ರಿಲ್ 18ರಂದು ಕಾವ್ಯ ಮತ್ತು ವರುಣ್ ಮದುವೆ ನಿಶ್ಚಯವಾಗಿತ್ತು. ಮದುವೆ ಹಿಂದಿನ ದಿನ ವರುಣ್ ತಂದೆ ಅಕಾಲಿಕ ನಿಧನದಿಂದ ಮತ್ತೆ ಮದುವೆ ಮುಂದೂಡಲಾಗಿತ್ತು. ಇದನ್ನೂ ಓದಿ: ಶ್ರದ್ಧಾ ಶ್ರೀನಾಥ್ ಗುಡ್ ಬೈ ಹೇಳಿದ್ದು ಯಾಕೆ.?

ಕಾವ್ಯ ಶಾ ಮತ್ತು ನಿರ್ಮಾಪಕ ವರುಣ್ ಇಂದು (ಜೂ.9) ಬೆಂಗಳೂರಿನ ನಂದಿ ಗ್ರೌಂಡ್ಸ್‌ನಲ್ಲಿ ಗುರು ಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ಸರಳವಾಗಿ ಮದುವೆ ಆಗಿದ್ದಾರೆ. ಮದುವೆಗೆ ಲೂಸ್ ಮಾದ ಯೋಗಿ ಅವರು ಕೂಡ ಬಂದು ಶುಭ ಹಾರೈಸಿದ್ದಾರೆ. ಸಾಕಷ್ಟು ಚಿತ್ರರಂಗದ ಗಣ್ಯರು ಮದುವೆ ಸಂಭ್ರಮಕ್ಕೆ ಸಾಕ್ಷಿಯಾಗಿ ಶುಭಹಾರೈಸಿದ್ದಾರೆ. ಒಟ್ನಲ್ಲಿ ಈ ಸುದ್ದಿ ಕೇಳಿ ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದಾರೆ.

Comments

Leave a Reply

Your email address will not be published. Required fields are marked *