ಸರಾಯಿ ಜೊತೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನಟಿ

ಟಿಯರ ಆತ್ಮಹತ್ಯೆಯ ಸರಣಿ ಮತ್ತೆ ಮುಂದುವರೆದಿದ್ದು, ಇದೀಗ ಕೋಲ್ಕತ್ತಾದಿಂದ ತೆಲುಗು ಸಿನಿಮಾ ರಂಗಕ್ಕೆ ಶಿಫ್ಟ್ ಆಗಿದೆ. ಹದಿನೈದು ದಿನಗಳಲ್ಲಿ ಪಶ್ಚಿಮ ಬಂಗಾಳದ ನಾಲ್ವರು ನಟಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸರಣಿ ಸಾವು ಪೊಲೀಸ್ ಅಧಿಕಾರಿಗಳನ್ನೂ ನಿದ್ದೆಗೆಡಿಸಿತ್ತು. ತನಿಖೆಗೂ ಆದೇಶ ಮಾಡಲಾಗಿದೆ. ಇದನ್ನೂ ಓದಿ: ಸಿಧು ಮೂಸೆ ವಾಲಾ ಹತ್ಯೆ: ತನಿಖೆ ವೇಳೆ ಶಾಕಿಂಗ್ ವಿಚಾರ ಬಯಲು

ಈ ಪ್ರಕರಣಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ ಟಾಲಿವುಡ್ ನಲ್ಲೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ತೆಲುಗಿನ ಕಿರುತೆರೆಯ ಹೆಸರಾಂತ ನಟ ಮೈಥಿಲಿ, ಭಾರೀ ಪ್ರಮಾಣದ ಮದ್ಯದ ಜೊತೆ ನಿದ್ದೆ ಮಾತ್ರೆ ಬೆರೆಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡಿರುವ ನಟಿಯನ್ನು ಹೈದರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ವಿಜಯ್ ದೇವರಕೊಂಡ ಚಿತ್ರಕ್ಕೆ ಜೋಡಿಯಾಗಿ ಕರಾವಳಿ ನಟಿ ಫಿಕ್ಸ್

ಮೈಥಿಲಿ ರೆಡ್ಡಿ ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗುತ್ತಿದೆ. ಪತಿಯು ಬೇರೆ ಹುಡುಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನುವ ಕಾರಣಕ್ಕಾಗಿ ಕುಟುಂಬದಲ್ಲಿ ಗಲಾಟೆಗಳು ನಡೆಯುತ್ತಿದ್ದವು ಎಂದು ಹೇಳಲಾಗಿದ್ದು, ಈ ಸಂಬಂಧ ಎರಡು ಬಾರಿ ಮೈಥಿಲಿ ಅವರು ಗಂಡನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ:ಕಿಯಾರಾಗೆ ಸಿದ್ಧಾರ್ಥ್ ಮಲ್ಹೋತ್ರಾ ಕ್ಲಾಸ್: ಅಷ್ಟಕ್ಕೂ ಆಗಿದ್ದೇನು?

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ಆತ್ಮಹತ್ಯೆಯ ಯತ್ನಕ್ಕೆ ನಿಜವಾದ ಕಾರಣ ಏನು ಅನ್ನುವ ಕುರಿತು ತನಿಖೆ ನಡೆಸಲಾಗುತ್ತಿದೆ. ಅಂದಹಾಗೆ ಪತಿ ಶ್ರೀಧರ್ ರೆಡ್ಡಿ ಕೂಡ ಟಿವಿ ಕಾರ್ಯಕ್ರಮವೊಂದರ ನಿರ್ದೇಶಕ ಎನ್ನಲಾಗುತ್ತಿದೆ.

Comments

Leave a Reply

Your email address will not be published. Required fields are marked *