30 ವರ್ಷಗಳ ನಂತರ ಕೋಡಿ ಹರಿದ ಕೆರೆಗೆ ಮೂವರು ಬಾಲಕರ ಬಲಿ

ಚಿಕ್ಕಬಳ್ಳಾಪುರ: ಧಾರಾಕಾರ ಮಳೆಯಿಂದ 30 ವರ್ಷಗಳ ನಂತರ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೋಡೇಗಂಡ್ಲು ಗ್ರಾಮದ ಕೆರೆ ಕೋಡಿ ಹರಿದಿದ್ದು, ನೋಡಲು ಹೋದ ಮೂವರು ಬಾಲಕರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಸಂಜೆ ಶಾಲೆ ಮುಗಿದ ಮೇಲೆ ಕೆರೆ ನೋಡಲು ಹೋದ ಬಾಲಕರು ಕೆರೆಯಲ್ಲಿ ಈಜಾಡಲು ಹೋಗಿದ್ದು, ಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೋಡೇಗಂಡ್ಲು ಗ್ರಾಮದ ವೆಂಕಟೇಶ್-ಗಾಯತ್ರಿ ದಂಪತಿ ಅವಳಿ ಮಕ್ಕಳಾದ ರಾಮ(10) – ಲಕ್ಷ್ಮಣ(10) ಹಾಗೂ ಮುನಿರಾಜು-ಗೌತಮಿ ದಂಪತಿ ಪ್ರಜ್ವಲ್(09) ಮೃತ ದುರ್ದೈವಿಗಳು. ಇದನ್ನೂ ಓದಿ:  ಇನ್ಮುಂದೆ ಶಾಲೆಗಳ ಮುಂದೆ ಮಾರುವಂತಿಲ್ಲ ಐಸ್‌ಕ್ರೀಮ್, ಚಾಟ್ ಫುಡ್ – ಇಲ್ಲಿದೆ ವಿವರ 

ಮೂವರು ಬಾಲಕರ ಸಾವಿನಿಂದ ಇಡೀ ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದ್ದು, ಮೃತರ ಮನೆಯಲ್ಲಿ ದುಃಖ ಮಡುಗಟ್ಟಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *