ಅಮರನಾಥ ಯಾತ್ರಿಕರ ಹತ್ಯೆಗೆ ಪ್ರತ್ಯುತ್ತರ: 3 ಉಗ್ರರನ್ನು ಸದೆಬಡಿದ ಸೇನೆ

 

ಶ್ರೀನಗರ: ಜಮ್ಮು ಕಾಶ್ಮೀರದ ಬುದ್ಗಾಮ್‍ನಲ್ಲಿ ಮಧ್ಯರಾತ್ರಿ ಭದ್ರತಾ ಪಡೆ ಎನ್‍ಕೌಂಟರ್ ನಡೆಸಿ ಮೂವರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರನ್ನು ಸದೆಬಡಿದಿದೆ.

ರಾಷ್ಟ್ರೀಯ ರೈಫಲ್ಸ್, ಜಮ್ಮು ಕಾಶ್ಮೀರ ಪೊಲೀಸ್‍ನ ಸ್ಪೆಷಲ್ ಆಪರೇಷನ್ ಗ್ರೂಪ್(ಎಸ್‍ಓಜಿ) ಹಾಗೂ ಸಿಆರ್‍ಪಿಎಫ್ ತಂಡ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆ.

ಗುಪ್ತಚರ ಮಾಹಿತಿಯ ಮೇರೆಗೆ ಸೇನಾ ಪಡೆ ಮಂಗಳವಾರ ರಾತ್ರಿ ಈ ಪ್ರದೇಶವನ್ನ ಸುತ್ತುವರಿದಿತ್ತು. ಶೋಧ ಕಾರ್ಯದ ವೇಳೆ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ಮಾಡಿದ್ರು. ಕೊನೆಗೆ ಶೋಧ ಕಾರ್ಯ ಎನ್‍ಕೌಂಟರ್ ಆಗಿ ಮಾರ್ಪಟ್ಟಿದ್ದು ಮೂವರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ. ದಾಳಿ ಸ್ಥಳದಲ್ಲಿ ಭದ್ರತಾ ಪಡೆ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಂಡಿದೆ.

ಸೋಮವಾರದಂದು ಅಮರನಾಥ ಯಾತ್ರಿಕರಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ 6 ಮಹಿಳೆಯರು ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ.

Comments

Leave a Reply

Your email address will not be published. Required fields are marked *