ದಸರಾ ಕಾರ್ಯಕ್ರಮದಲ್ಲಿ ಮತ್ತೆ ಭೈರಪ್ಪರಿಗೆ ಜಿಲ್ಲಾಡಳಿತದಿಂದ ಅವಮಾನ

ಮೈಸೂರು: ದಸರಾ ಉದ್ಘಾಟಿಸಿ ಭಾಷಣ ಮಾಡುತ್ತಿದ್ದ  ಎಸ್.ಎಲ್ ಭೈರಪ್ಪ ಅವರಿಗೆ ಜಿಲ್ಲಾಡಳಿತ ಮತ್ತೆ ಅವಮಾನ ಮಾಡಿದೆ.

ಕಾರ್ಯಕ್ರಮ ಉದ್ಘಾಟಿಸಿದ ನಂತರ ಭೈರಪ್ಪ ಅವರು ಭಾಷಣ ಮಾಡುತ್ತಿದ್ದರು. ಭೈರಪ್ಪ ಅವರು ಹೆಚ್ಚು ಹೊತ್ತು ಭಾಷಣ ಮಡುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಸದರ ಬಳಿ ತೆರಳಿ ಸಮಯ ಹೆಚ್ಚಾಗಿದೆ. ಭೈರಪ್ಪ ಅವರಿಗೆ ತಿಳಿಸಿ ಎಂದು ಕೇಳಿಕೊಂಡಿದೆ. ಹೀಗಾಗಿ  ಪ್ರತಾಪ್ ಸಿಂಹ ಅವರು ಸಮಯ ಹೆಚ್ಚಾಗಿದೆ ಸರ್ ಎಂದು ಸಾಹಿತಿಗೆ ನೆನಪಿಸಿದ್ದಾರೆ. ಪ್ರತಾಪ್ ಸಿಂಹ ಮಾತು ಕೇಳಿದ ನಂತರ ಭೈರಪ್ಪ ಅವರು, “ಕಾಲ ಮೀರಿತು ಎಂದು ಹೇಳುತ್ತಿದ್ದಾರೆ. ಅವರು ನನಗೆ ಹೇಳದೇ ಇದ್ದರೂ ನಾನು ಐದು ಸೆಕೆಂಡಿನಲ್ಲಿ ಭಾಷಣ ಮುಗಿಸುತ್ತಿದೆ. ಆ ಸಮಯದ ಬಗ್ಗೆ ಅರಿವಿದೆ” ಎಂದು ಹೇಳಿದರು. ಇದನ್ನೂ ಓದಿ: ಸಾಹಿತಿ ಎಸ್.ಎಲ್ ಭೈರಪ್ಪ ಅವರಿಗೆ ಅಗೌರವ

ಇಂದು ಕಾರ್ಯಕ್ರಮ ಉದ್ಘಾಟನೆಗೂ ಮೊದಲು ಎಸ್.ಎಸ್ ಭೈರಪ್ಪ ಅವರಿಗೆ ಅಗೌರವ ತೋರಲಾಗಿತ್ತು. ಎಸ್.ಎಲ್ ಭೈರಪ್ಪ ಅವರನ್ನು ಸ್ವಾಗತಿಸಿ ಮೆರವಣಿಗೆ ಮೂಲಕ ಮಹಿಷಾ ಪ್ರತಿಮೆಯಿಂದ ವೇದಿಕೆಗೆ ಕರೆದೊಯ್ಯಬೇಕಿತ್ತು. ಹೀಗಾಗಿ ಭೈರಪ್ಪ ಅವರು ಸಿಎಂಗಾಗಿ 30 ನಿಮಿಷಗಳ ಕಾಲ ಮಹಿಷಾ ಪ್ರತಿಮೆ ಬಳಿ ನಿಲ್ಲಿಸಿಕೊಂಡ ಕಾರಿನಲ್ಲೇ ಕುಳಿತಿದ್ದರು. ಅರ್ಧ ಗಂಟೆಯಾದರೂ ಸಿಎಂ ಯಡಿಯೂರಪ್ಪ ಹಾಗೂ ಸಚಿವರು ಬರಲೇ ಇಲ್ಲ. ಹೀಗಾಗಿ ಯಡಿಯೂರಪ್ಪ ಹಾಗೂ ಸಚಿವರು ಸಾಗಿದ ಮೇಲೆ ಭೈರಪ್ಪ ಅವರು ಬೇಸರದಿಂದ ಒಬ್ಬರೇ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದರು. ಇದನ್ನೂ ಓದಿ: ನಮ್ಮಲ್ಲಿ ವ್ಯವಸಾಯ ಹಾಳಾಗುವುದಕ್ಕೂ ರಾಜಕಾರಣಿಗಳು ಕಾರಣ: ಎಸ್.ಎಲ್ ಭೈರಪ್ಪ

ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಉದ್ಘಾಟನಾ ಭಾಷಣ ಮಾಡಿದ ಅವರು, ಹಳ್ಳಿ ಕಡೆಯಲ್ಲಿ ಸ್ಪಲ್ಪ ತಂಪು ಇರುವಾಗ ಹೊಲದ ಕೆಲಸ ಮುಗಿಸುತ್ತಾರೆ. ಆದರೆ ಚುನಾವಣೆ ಬಂದ ಮೇಲೆ ಆ ವ್ಯವಸ್ಥೆ ಬಹುತೇಕ ಕಡೆ ಮರೆಯಾಗಿದೆ. ಕಾಯಕ ನಿಷ್ಠೆ ಕಡಿಮೆಯಾಗುತ್ತಿದೆ. ಆದ್ದರಿಂದ ನಮ್ಮಲ್ಲಿ ವ್ಯವಸಾಯ ಹಾಳಾಗುತ್ತಿರುವುದಕ್ಕೆ ರಾಜಕಾರಣಿಗಳು ಕಾರಣ ಎಂದು ಹೇಳಿದರು.

Comments

Leave a Reply

Your email address will not be published. Required fields are marked *