ದೋಸ್ತಿ ಸೀಟು ಹಂಚಿಕೆ ಇಂದು ಫೈನಲ್ – ದೇವೇಗೌಡ್ರನ್ನ ರಾಹುಲ್ ಭೇಟಿ

ಬೆಂಗಳೂರು: ಲೋಕಸಭಾ ಚುನಾವಣೆ ಸೀಟು ಹಂಚಿಕೆ ಸಂಬಂಧ ದೋಸ್ತಿ ಸರ್ಕಾರದ ನಾಯಕರ ನಡುವಿನ ಗೊಂದಲಕ್ಕೆ ಇಂದು ತೆರೆ ಬೀಳಲಿದೆ.

ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ. ಈಗಾಗಲೇ ರಾಜ್ಯ ನಾಯಕರು ಮೊದಲ ಹಂತದ ಮಾತುಕತೆ ನಡೆಸಿದ್ದು ಇಂದು ಉಭಯ ಪಕ್ಷದ ವರಿಷ್ಠರು ಅಂತಿಮ ಮಾತುಕತೆ ನಡೆಸಲಿದ್ದಾರೆ.

ಈ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಮೂಲಕ ರಾಹುಲ್ ಗಾಂಧಿ ಮಾಹಿತಿ ಪಡೆದಿದ್ದು ಅಂತಿಮವಾಗಿ ಸೀಟು ಹಂಚಿಕೆ ಒಪ್ಪಂದ ಕುರಿತು ಇಂದು ಅಂತಿಮ ನಿರ್ಣಯ ತೆಗೆದುಕೊಳ್ಳಲಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

ಶೃಂಗೇರಿಯಲ್ಲಿ ಯಾಗ:
ಮೊಮ್ಮಕ್ಕಳ ರಾಜಕೀಯ ಭವಿಷ್ಯಕ್ಕಾಗಿ ದೊಡ್ಡಗೌಡರು ಇಷ್ಟದೈವದ ಮೊರೆಹೋಗಲಿದ್ದಾರೆ ಎನ್ನಲಾಗಿದೆ. ಮಂಡ್ಯ, ಹಾಸನ ಲೋಕಸಭಾ ಕಣದಲ್ಲಿರೋ ಮೊಮ್ಮಕ್ಕಳಿಗಾಗಿ ಇಂದು ರಾತ್ರಿ ಶೃಂಗೇರಿಗೆ ಭೇಟಿ ನೀಡಿ ವಿಶೇಷ ಪೂಜೆ ನಡೆಸಲಿದ್ದಾರೆ.

ಸಿಎಂ ಕುಮಾರಸ್ವಾಮಿ, ಸಚಿವ ರೇವಣ್ಣ, ನಿಖಿಲ್-ಪ್ರಜ್ವಲ್ ಸೇರಿ ಕುಟುಂಬದ ಸದಸ್ಯರು ಭಾಗಿಯಾಗುವ ಸಾಧ್ಯತೆಯಿದೆ. ಮಠದ ಯಾಗ ಶಾಲೆಯಲ್ಲಿ ಕಳೆದೊಂದು ವಾರದಿಂದ ಚಂಡಿಕಾಯಾಗ ನಡೆಯುತ್ತಿದ್ದು ಯಾಗದ ಪೂರ್ಣಾಹುತಿಗಾಗಿ ದೊಡ್ಡಗೌಡರ ಕುಟುಂಬ ಆಗಮಿಸಲಿದೆ. ಇಂದು ರಾತ್ರಿ ಮಠಕ್ಕೆ ಆಗಮಿಸಿ ನಾಳೆ ಹೋಮ-ಹವನದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *