ಸಚಿವ ಸಂಪುಟ ವಿಸ್ತರಣೆ- ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಖಡಕ್ ಸೂಚನೆ!

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಗ್ಗಂಟ್ಟಾಗಿದ್ದು, ಇದೀಗ ವಿದೇಶ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ರಾಹುಲ್, ಸಚಿವ ಸಂಪುಟ ವಿಸ್ತರಣೆ ವಿಳಂಬ ಮಾಡಬೇಡಿ. ನಾನು ವಿದೇಶ ಪ್ರವಾಸದಿಂದ ವಾಪಸ್ ಆಗುವ ನೆಪ ಬೇಡ. ಖಾತೆ ಸಂಚಿಕೆ ಈಗಾಗಲೇ ತಡವಾಗಿದೆ. ಇನ್ನೂ ತಡವಾದಲ್ಲಿ ಭಿನ್ನಮತ ಸ್ಪೋಟ ವಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಶೀಘ್ರವಾಗಿ ಸಂಪುಟ ವಿಸ್ತರಿಸಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿಯೇ 5 ವರ್ಷ ಸಿಎಂ – ಲೋಕಸಭಾ ಚುನಾವಣೆಯಲ್ಲೂ ಮೈತ್ರಿಗೆ ರೆಡಿ!

ಸಚಿವ ಸಂಪುಟ ವಿಸ್ತರಣೆಯು ದಿನದಿನಕ್ಕೆ ಕಗ್ಗಂಟಾದ ಪರಿಣಾಮ ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿಯವರು ವಾಪಸ್ಸಾದ ಬಳಿಕ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ನೀರ್ಧರಿಸಲು ರಾಜ್ಯ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದರು. ಈ ವಿಚಾರವನ್ನು ರಾಹುಲ್ ಗಾಂಧಿಯವರ ಗಮನಕ್ಕೆ ನಾಯಕರು ತಂದಿದ್ದರು. ಈ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಹುಲ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷರ ಸೂಚನೆಯ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ರಾಜ್ಯ ನಾಯಕರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ತಾಯಿ ಸೋನಿಯಾ ಗಾಂಧಿಯವರಿಗೆ ಚಿಕಿತ್ಸೆಯ ಸಲುವಾಗಿ ಇಬ್ಬರೂ ಅಮೆರಕಕ್ಕೆ ತೆರಳಿದ್ದಾರೆ.

Comments

Leave a Reply

Your email address will not be published. Required fields are marked *