ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಜಯ್ ದೇವಗನ್ ಭೇಟಿ

ಮಂಗಳೂರು: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ನಟ ಅಜಯ್ ದೇವಗನ್ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಜಯ್ ದೇವಗನ್ ಭೇಟಿ ನೀಡಿ, ಆಶ್ಲೇಷ ಬಲಿ ಪೂಜೆ ಮಾಡಿಸಿದರು. ವಿಶೇಷ ಪೂಜೆ ನೆರವೇರಿಸಿದ ಬಳಿಕ ಸಂಪುಟ ನರಸಿಂಹಸ್ವಾಮಿ ಮಠದ ಸ್ವಾಮೀಜಿಯವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು. ಈ ವೇಳೆ ಅವರ ಸಹಚರರು ಹಾಗೂ ಭಕ್ತರು ಅವರಿಗೆ ಸಾಥ್ ನೀಡಿದರು.

ಅಜಯ್ ದೇವಗನ್ ಆಗಾಗ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುತ್ತಿರುತ್ತಾರೆ. ಇದು ಅವರ ಖಾಸಗಿ ಭೇಟಿಯಾಗಿದ್ದು, ಈ ಹಿಂದೆ ಅವರ ಸ್ನೇಹಿತರೊಬ್ಬರು ಸ್ಥಳದ ಮಹಾತ್ಮೆಯನ್ನು ವಿವರಿಸಿ, ದೇವಸ್ಥಾನಕ್ಕೆ ಭೇಟಿ ನೀಡುವಂತೆ ಸಲಹೆ ನೀಡಿದ್ದರು. ಹೀಗಾಗಿ ಅಜಯ್ ದೇವಗನ್ ಆಗಾಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆಯುತ್ತಾರೆ.

Comments

Leave a Reply

Your email address will not be published. Required fields are marked *