ಮದ್ಯ ಕಳ್ಳತನದ ಆರೋಪಿ ಬಾವಿಗೆ ಬಿದ್ದು ಸಾವು

– ಪೊಲೀಸರ ವಿರುದ್ಧ ಕೊಲೆ ಆರೋಪ

ಬೆಂಗಳೂರು: ಬಾರ್‌ನಲ್ಲಿ ಮದ್ಯ ಕಳ್ಳತನ ಮಾಡಿದ್ದ ಆರೋಪಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಕೂರು ಹೊರವಲಯ ಹೊಸಕೋಟೆಯ ನಡುವತ್ತಿ ಗ್ರಾಮದಲ್ಲಿ ನಡೆದಿದೆ.

ನಡುವತ್ತಿ ಗ್ರಾಮದ ಮುನಿಪಿಳ್ಳಪ್ಪ (52) ಬಾವಿಗೆ ಬಿದ್ದು ಸಾವನಪ್ಪಿರುವ ಆರೋಪಿ. ಮುನಿಪಿಳ್ಳಪ್ಪ ನಡುವತ್ತಿ ಗ್ರಾಮದ ಬಾರ್ ಕಳ್ಳತನ ಪ್ರಕರಣದ ಆರೋಪಿಯಾಗಿದ್ದ. ಹೀಗಾಗಿ ಆರೋಪಿಯನ್ನು ಬಂಧಿಸಿದ್ದ ತಿರುಮಶೆಟ್ಟಿಹಳ್ಳಿ ಪೊಲೀಸರು ಸ್ಥಳ ಮಹಜರ್ ಮಾಡಲು ಶುಕ್ರವಾರ ಕರೆದೊಯ್ದಿದ್ದರು. ಇದನ್ನೂ ಓದಿ: ಏನೇ ಒತ್ತಡ ಬಂದ್ರೂ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ: ಬೊಮ್ಮಾಯಿ

ಮುನಿಪಿಳ್ಳಪ್ಪ ಬಾರ್‍ನಲ್ಲಿ ಕದ್ದ ಮದ್ಯದವನ್ನು ಬಾವಿಯ ಬಳಿ ಬಚ್ಚಿಟ್ಟ ಹಿನ್ನೆಲೆ ಅಲ್ಲಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಆಯತಪ್ಪಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮದ್ಯವ್ಯಸನಿಗಳಿಗೆ ಬ್ಯಾಡ್ ನ್ಯೂಸ್.!

ಆದರೆ ಆರೋಪಿಯ ಸಂಬಂಧಿಕರು ಮಾತ್ರ, ‘ಪೊಲೀಸರು ಮದ್ಯ ಕಳ್ಳತನ ಮಾಡಿದ್ದಿಯಾ ಎಂದು ಮುನಿಪಿಳ್ಳಪ್ಪನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಹಿನ್ನೆಲೆ ಆತ ಸಾವನ್ನಪ್ಪಿದ್ದು, ಅದನ್ನು ಮುಚ್ಚಿಹಾಕಲು ಪೊಲೀಸರು ಮುನಿಪಿಳ್ಳಪ್ಪ ಬಾವಿಗೆ ಬಿದ್ದು ಸಾವನಪ್ಪಿದ್ದಾನೆ ಎಂದು ಸುಳ್ಳು ಹೇಳುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮದ್ಯ ಮಾರಾಟಕ್ಕೆ ಅನುಮತಿ ಕೋರಿದ್ದ ವೈದ್ಯರಿಗೆ 10 ಸಾವಿರ ದಂಡ

Comments

Leave a Reply

Your email address will not be published. Required fields are marked *