ಎಣ್ಣೆ ಪಾರ್ಟಿಯಲ್ಲಿ ಲವ್ ಮ್ಯಾಟರ್- ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಂದ್ರು

ಮೈಸೂರು: ಎಣ್ಣೆ ಪಾರ್ಟಿಯಲ್ಲಿ ಲವ್ ವಿಚಾರದಿಂದ ಮೂವರು ಸ್ನೇಹಿತರ ನಡುವೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಜಿಲ್ಲೆಯ ಕ್ಯಾತಮಾರನಹಳ್ಳಿಯಲ್ಲಿ ಕೊಲೆ ನಡೆದಿದೆ.

ಸೋಮವಾರ ಮದ್ಯ ಸಿಕ್ಕ ಖುಷಿಯಲ್ಲಿ ಯುವಕರು ಪಾರ್ಟಿ ಮಾಡಿದ್ದರು. ಕ್ಯಾರಮಾರನಹಳ್ಳಿಯ ಮಧು, ಕಿರಣ್ ಮತ್ತು ಸತೀಶ್ ಮೂವರು ಎಣ್ಣೆ ಪಾರ್ಟಿ ಮಾಡಿದ್ದಾರೆ. ಪಾರ್ಟಿ ವೇಳೆ ಗೆಳೆಯರ ಮಧ್ಯೆ ಪ್ರೇಮ ವಿಷಯಗಳು ಪ್ರಸ್ತಾಪವಾಗಿ ಜಗಳ ಉಂಟಾಗಿದೆ. ನಶೆಯಲ್ಲಿದ್ದ ಮಧು ಮತ್ತು ಕಿರಣ್ ಇಬ್ಬರು ಚಾಕುವಿನಿಂದ ಇರಿದು ಸತೀಶ್ ನನ್ನು ಕೊಲೆಗೈದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೊಲೆಯ ಬಳಿಕ ಮಧು ಮತ್ತು ಕಿರಣ್ ಪರಾರಿಯಾಗಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *