ಸಂಜಯ್ ಲೀಲಾ ಬನ್ಸಾಲಿ ಜೊತೆ ಅಲ್ಲು ಅರ್ಜುನ್ ಸಿನಿಮಾ

ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ದಕ್ಷಿಣ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ‘ಪುಷ್ಪ’ ಸಿನಿಮಾ ಮೂಲಕ ಬಾಲಿವುಡ್‍ಗೂ ಎಂಟ್ರಿ ಕೊಟ್ಟಿದ್ದು, ಸಿನಿಪ್ರಿಯರನ್ನು ರಂಜಿಸಿದ್ದಾರೆ. ಅಲ್ಲದೇ ಬಾಲಿವುಡ್ ಎಂಟ್ರಿಗೆ ಸಿದ್ಧರಾಗುತ್ತಿದ್ದಾರೆ ಎಂಬ ಸುದ್ದಿಯೂ ಬಾಲಿವುಡ್‍ನಲ್ಲಿ ಕೇಳಿಬರುತ್ತಿದೆ. ಅಲ್ಲದೇ ಇತ್ತೀಚೆಗೆ ಅಲ್ಲು ಅರ್ಜುನ್, ಬಾಲಿವುಡ್ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಕಚೇರಿಗೆ ಭೇಟಿಕೊಟ್ಟಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹೇಳಿದ್ದಾರೆ.

‘ಪುಷ್ಪ’ ಸಿನಿಮಾ ಮೂಲಕ ಹಿಂದಿ ಸಿನಿರಸಿಕರಿಗೂ ಹತ್ತಿರವಾಗಿರುವ ಅಲ್ಲು ಬಾಲಿವುಡ್ ಸಿನಿಮಾ ಮಾಡಲು ಸಿದ್ಧರಾಗಿದ್ದಾರೆ ಎಂಬ ಸುದ್ದಿ ಎಲ್ಲಕಡೆ ಹರಿದಾಡುತ್ತಿದೆ. ಈ ಸುದ್ದಿಗೆ ಒತ್ತುಕೊಂಡುವಂತೆ ಅಲ್ಲು, ಸಂಜಯ್ ಲೀಲಾ ಬನ್ಸಾಲಿ ಅವರ ಕಚೇರಿಗೆ ಭೇಟಿಕೊಟ್ಟಿದ್ದಾರೆ. ಈ ವೇಳೆ ಅವರು ಸಿನಿಮಾ ಬಗ್ಗೆ ಮಾತನಾಡಿದ್ದಾರೆ ಎಂಬ ಸುದ್ದಿ ಓಡಾಡುತ್ತಿದೆ. ಆದರೆ ಈ ಕುರಿತು ಇಬ್ಬರು ಯಾವುದೇ ರೀತಿಯ ಮಾಹಿತಿಯನ್ನು ಕೊಟ್ಟಿಲ್ಲ. ಇದನ್ನೂ ಓದಿ: ಫ್ಯಾನ್ಸ್ ಒತ್ತಾಯದ ಮೇರೆಗೆ ವಿಷ್ಣುದಾದ ಇತಿಹಾಸ ಬರೆದ ಮೂವೀ ರೀ-ರಿಲೀಸ್ 

ಪ್ರಸ್ತುತ ಇಬ್ಬರು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಪುಷ್ಪ 2 ಸಿನಿಮಾದಲ್ಲಿ ಅಲ್ಲು ಅರ್ಜುನ್ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಬನ್ಸಾಲಿ ಅವರು ರಣವೀರ್ ಸಿಂಗ್ ಜೊತೆಯಲ್ಲಿ ಕೆಲಸ ಮಾಡುತ್ತಿದ್ದು, ಇದು ಇವರಿಬ್ಬರ ಕಾಂಬಿನೇಷನ್‍ನಲ್ಲಿ ಮೂಡಿಬರುತ್ತಿರುವ ನಾಲ್ಕನೇ ಸಿನಿಮಾ ಆಗಿದೆ. ಈ ಸಿನಿಮಾಗೆ ‘ಬೈಜು ಬವರಾ’ ಎಂದು ಹೆಸರಿಡಲಾಗಿದೆ. ಈ ಸಿನಿಮಾ ಮುಗಿದ ನಂತರ ಇವರು ಅಲ್ಲು ಜೊತೆ ಕೆಲಸ ಮಾಡಲು ಬನ್ಸಾಲಿ ಯೋಜನೆಯನ್ನು ಹಾಕುತ್ತಿದ್ದಾರೆ. ಒಂದು ವೇಳೆ ಇವರಿಬ್ಬರು ಒಟ್ಟಿಗೆ ನಟಿಸಿದರೆ ಅಭಿಮಾನಿಗಳು ಸಂತೋಷ ಪಡುವುದರಲ್ಲಿ ಸಂದೇಹವೇ ಇಲ್ಲ.

Comments

Leave a Reply

Your email address will not be published. Required fields are marked *