ರಾಮಮಂದಿರ ಕಟ್ಟೋವರೆಗೂ ನಿದ್ರಿಸಬೇಡಿ, ನಾನೂ ನಿದ್ರಿಸಲ್ಲ- ಪೇಜಾವರ ಶ್ರೀ

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುವವರೆಗೆ ನಿದ್ರಿಸಬೇಡಿ. ನಾನಂತೂ ನಿದ್ರಿಸಲ್ಲ ಎಂದು ಉಡುಪಿ ಮಠದ ಪೇಜಾವರ ಶ್ರೀ ಹೇಳಿದ್ದಾರೆ.

ಹಿಂದೂ ಸಮಾಜೊತ್ಸವದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕಟು ಟೀಕೆ ಮಾಡಿದ್ರು. ಸಿಎಂ ಬಸವಣ್ಣನ ಭಕ್ತರೆನ್ನುತ್ತಾರೆ. ನಾನು ಇದನ್ನು ಒಪ್ಪಲು ಸಾಧ್ಯವಿಲ್ಲ. ಬಸವಣ್ಣ ಗೋಹತ್ಯೆ ಬಗ್ಗೆ ವಿರೋಧ ಇದ್ದವರು. ಸಿಎಂ ಗೋಮಾಂಸ ಭಕ್ಷಕರಿಗೆ ಬೆಂಬಲ ಇದ್ದಾರೆ. ಸಿದ್ದರಾಮಯ್ಯ ಹೇಗೆ ಬಸವಣ್ಣನ ಭಕ್ತರಾಗಲು ಸಾಧ್ಯ ಅಂತ ಹೇಳಿದ್ರು.

ರಾಮಮಂದಿರ ನಿರ್ಮಾಣ ಆಗುವವರೆಗೆ ನಿದ್ದೆ ಮಾಡದಿರಿ. ನಾನಂತೂ ನಿದ್ದೆ ಮಾಡಲ್ಲ. ನನಗೆ ಹಿಂದ- ಅಹಿಂದ ಒಂದೇ. ಕೆಲವರಿಗೆ ಅಹಿಂದ ಮಾತ್ರ ಮುಖ್ಯ. ಬುದ್ಧಿಜೀವಿಗಳ ಬಗ್ಗೆ ನನಗೆ ಕನಿಕರವಾಗುತ್ತಿದೆ. ಕಾಲು ಕೆರೆದುಕೊಂಡು ಜಗಳಕ್ಕೆ ಬರ್ತಾರೆ ಅಂತ ಅವರು ಹೆಳಿದ್ರು.

ಮುಸ್ಲಿಮರಿಂದ ತಂಪು ಪಾನೀಯ: ಹಿಂದೂ ಸಮಾಜೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ಸಮಸ್ತ ಮುಸ್ಲಿಂ ಬಾಂಧವರಿಂದ ತಂಪು ಪಾನೀಯವನ್ನು ವಿತರಿಸಲಾಗಿತ್ತು.

Comments

Leave a Reply

Your email address will not be published. Required fields are marked *