ಸಿಎಂ ಅಧ್ಯಕ್ಷತೆಯಲ್ಲಿ ಅಂಬರೀಶ್ ಸ್ಮಾರಕ ಪ್ರತಿಷ್ಠಾನ ಸಮಿತಿ ರಚನೆ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಮೇರು ನಟರಾದ ಡಾ. ರಾಜ್‍ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪ್ರತಿಷ್ಠಾನದಂತೆಯೇ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಪ್ರತಿಷ್ಠಾನ ನಿರ್ಮಿಸಲು ಸರ್ಕಾರ ಮುಂದಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾತ್ಮಕ ನಿರ್ಣಯ, ರೂಪು ರೇಷೆ, ಅನುಷ್ಠಾನ ಹಾಗೂ ಕಾರ್ಯಕ್ರಮಗಳ ನಿರ್ವಹಣೆಗಳ ಪರಿಶೀಲನೆಗಾಗಿ ಸಿಎಂ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಎಂಟು ಸದಸ್ಯರ ಅಂಬರೀಶ್ ಸ್ಮಾರಕ ಪ್ರತಿಷ್ಠಾನ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ಆಯುಕ್ತರು ಅಥವಾ ನಿರ್ದೇಶಕರು, ಅಂಬರೀಶ್ ಅವರ ಪತ್ನಿ ಸಂಸದೆ ಸುಮಲತಾ, ಅವರ ಪುತ್ರ ಅಭಿಷೇಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಅಥವಾ ಅವರ ಪ್ರತಿನಿಧಿ, ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರು ಅಥವಾ ಅವರ ಪ್ರತಿನಿಧಿ ಹಾಗೂ ಕಂಠೀರವ ಸ್ಟೂಡಿಯೋದ ವ್ಯವಸ್ಥಾಪಕ ನಿರ್ದೇಶಕರು ಈ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

Comments

Leave a Reply

Your email address will not be published. Required fields are marked *