ಎಚ್‍ಸಿಎ ವಿರುದ್ಧ ಭ್ರಷ್ಟಾಚಾರ ಆರೋಪ- ಮತ್ತೆ ಕ್ರಿಕೆಟ್‍ನಿಂದ ಹೊರಗುಳಿದ ರಾಯುಡು

ಹೈದರಾಬಾದ್: ನಿವೃತ್ತಿ ನಿರ್ಧಾರ ಬದಲಿಸಿದ್ದ ಟೀಂ ಇಂಡಿಯಾ ಕ್ರಿಕೆಟರ್ ಅಂಬಟಿ ರಾಯುಡು, ಹೈದರಾಬಾದ್ ಕ್ರಿಕೆಟ್ ಅಸೋಸಿಯೇಶನ್ (ಎಚ್‍ಸಿಎ) ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಕ್ರಿಕೆಟ್‍ನಿಂದ ಹೊರಗುಳಿದಿದ್ದಾರೆ.

ಎಚ್‍ಸಿಎನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಅಂಬಟಿ ರಾಯುಡು ಗಂಭೀರ ಆರೋಪ ಮಾಡಿದ್ದಾರೆ. ಈ ವಿಚಾರವನ್ನು ರಾಯುಡು ಟ್ವೀಟ್ ಮೂಲಕ ವ್ಯಕ್ತಪಡಿಸಿದ್ದು, ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ತೆಲಂಗಾಣ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಟ್ವೀಟ್ ಮಾಡಿರುವ ರಾಯುಡು, ಕೈಗಾರಿಕೆ ಮತ್ತು ನಗರಾ ಆಡಳಿತ ಸಚಿವ ಕೆ.ಟಿ.ರಾಮರಾವ್ ಅವರಿಗೆ ಟ್ಯಾಗ್ ಮಾಡಿ, ಹಲೋ ಸರ್, ಹೈದರಾಬಾದ್ ಕ್ರಿಕೆಟ್ ಅಸೋಸಿಯೇಶನ್‍ನಲ್ಲಿ (ಎಚ್‍ಸಿಎ) ಹರಡಿರುವ ಭ್ರಷ್ಟಾಚಾರದ ಬಗ್ಗೆ ಗಮನಹರಿಸಿ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ನಾನು ನಿಮ್ಮನ್ನು ಕೋರುತ್ತೇನೆ. ಹೈದರಾಬಾದ್ ತಂಡದಲ್ಲಿ ನಡೆಯುತ್ತಿರುವ ಭ್ರಷ್ಟ ತಡೆದರೆ ಉತ್ತಮ ತಂಡವಾಗಿ ಹೊರ ಹೊಮ್ಮುತ್ತದೆ ಎಂದು ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಶನ್‍ನ ಆಯ್ಕೆ ಸಮಿತಿಯ ಅಧ್ಯಕ್ಷ ಆರ್.ಎ.ಸ್ವರೂಪ್ ಅವರಿಗೆ ಪತ್ರ ಅಂಬಟಿ ರಾಯುಡು ಬರೆದಿದ್ದು, ಮುಂಬರುವ ರಣಜಿ ಟ್ರೋಫಿಗೆ ನಾನು ಆಡುವುದಿಲ್ಲ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಭಾರತದ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರು ಅದೇ ವರ್ಷ ಹೈದರಾಬಾದ್ ಕ್ರಿಕೆಟ್ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಂದಿನಿಂದ, ರಾಯುಡು ಎಚ್‍ಸಿಎ ರಾಜಕೀಯ ಮತ್ತು ಭ್ರಷ್ಟಾಚಾರದ ವಿಷಯವನ್ನು ಪದೇ ಪದೇ ಎತ್ತುತ್ತಿದ್ದಾರೆ.

2019ರ ವಿಶ್ವಕಪ್ ಟೂರ್ನಿ ವೇಳೆ ಭಾರತ ತಂಡಕ್ಕೆ ರಾಯುಡು ಅವರನ್ನು ಅವರನ್ನು ಕೈಬಿಟ್ಟು ವಿಜಯ್ ಶಂಕರ್ ಅವರಿಗೆ ಮಣೆ ಹಾಕಲಾಗಿತ್ತು. ಈ ವಿಚಾರವಾಗಿ ರಾಯುಡು, ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ ಪ್ರಸಾದ್ ಅವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು.

ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗದ ಹಿನ್ನೆಲೆಯಲ್ಲಿ ರಾಯುಡು ಅಂತರಾಷ್ಟ್ರೀಯ ಕ್ರಿಕೆಟ್‍ಗೆ ಆಗಸ್ಟ್ ನಲ್ಲಿ ನಿವೃತ್ತಿ ಘೋಷಿಸಿದ್ದರು. ಆದರೆ ಒಂದು ತಿಂಗಳ ನಂತರ ತಮ್ಮ ನಿರ್ಧಾರವನ್ನು ಹಿಂಪಡೆದು, ಎಚ್‍ಸಿಎ ಪರ ಮತ್ತೆ ಮೈದಾನಕ್ಕೆ ಇಳಿಯಲು ಸಿದ್ಧ ಎಂದು ಹೇಳಿದ್ದರು.

ನಿವೃತ್ತಿ ನಿರ್ಧಾರದಿಂದ ಹಿಂದಿರುಗಿದ ರಾಯುಡು, ವಿಜಯ್ ಹಜಾರೆ ಟ್ರೋಫಿಯಲ್ಲಿ 7 ಇನ್ನಿಂಗ್ಸ್ ಗಳಲ್ಲಿ 233 ರನ್ ಗಳಿಸಿದ್ದಾರೆ. ಹೈದರಾಬಾದ್ ಪರ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ರಾಯದು ಎರಡನೇ ಸ್ಥಾನದಲ್ಲಿದ್ದಾರೆ. ರಾಯುಡು ಭಾರತದ ಪರ 55 ಏಕದಿನ ಪಂದ್ಯಗಳನ್ನು ಆಡಿದ್ದು, 1,694 ರನ್ ಗಳಿಸಿದ್ದಾರೆ.

Comments

Leave a Reply

Your email address will not be published. Required fields are marked *