ಅಂಬುಲೆನ್ಸ್‌ಗೆ ಟ್ರ್ಯಾಕ್ಟರ್ ಡಿಕ್ಕಿ – ರೋಗಿ ಸಾವು, 6 ಮಂದಿಗೆ ಗಾಯ

ರಾಯಚೂರು: ಅಂಬುಲೆನ್ಸ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಮನ್ಸಲಾಪುರ ಬಳಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಹನುಮಂತರಾಯ (48) ಮೃತ ವ್ಯಕ್ತಿ. ಮೃತ ಹನುಮಂತರಾಯನ ತಲೆಗೆ ಪೆಟ್ಟಾಗಿದ್ದು, ಮಾನ್ವಿ ತಾಲೂಕಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಹನುಮಂತರಾಯನನ್ನ ಮಾನ್ವಿ ತಾಲೂಕಿನ ಆಸ್ಪತ್ರೆಯಿಂದ ರಿಮ್ಸ್‌ಗೆ ಅಂಬುಲೆನ್ಸ್ ಮೂಲಕ ಕರೆತರಲಾಗುತ್ತಿತ್ತು.

ಈ ವೇಳೆ ಮನ್ಸಲಾಪುರ ಬಳಿ ಬೈಪಾಸ್ ರಸ್ತೆಯಲ್ಲಿ ಅಂಬುಲೆನ್ಸ್‌ಗೆ ಟ್ರ್ಯಾಕ್ಟರ್ ಎದುರಿನಿಂದ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಅಂಬುಲೆನ್ಸ್‌ನಲ್ಲಿದ್ದ ರೋಗಿ ಸಾವನ್ನಪ್ಪಿದ್ದಾನೆ. ಅಪಘಾತದಲ್ಲಿ ಮೃತನ ಪತ್ನಿ ಸೇರಿ ಅಂಬುಲೆನ್ಸ್‌ನಲ್ಲಿದ್ದ ಆರು ಜನರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Comments

Leave a Reply

Your email address will not be published. Required fields are marked *