ಹೊಸ ಬಜೆಟ್ ಮಂಡನೆಗೆ ರಾಹುಲ್ ವಿರೋಧವಿಲ್ಲ: ಎಚ್‍ಡಿಕೆ

ನವದೆಹಲಿ: ಹೊಸ ಸರ್ಕಾರ ಬಂದಾಗ ಹೊಸ ಬಜೆಟ್ ಮಂಡಿಸುವುದು ವಾಡಿಕೆ. ಹೊಸ ಬಜೆಟ್ ಮಂಡನೆ ಮಾಡಲು ಎಐಸಿಸಿ ರಾಹುಲ್ ಗಾಂಧಿ ಅವರ ವಿರೋಧ ಇಲ್ಲ ಎಂದು ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, ಹೊಸ ಬಜೆಟ್ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಭೇಟಿ ವೇಳೆ ಸಮ್ಮಿಶ್ರ ಸರ್ಕಾರದ ಆಡಳಿತ ಬಗ್ಗೆ ಚರ್ಚೆ ಮಾಡಿದ್ದು, ರೈತರ ಸಾಲ ಮನ್ನಾ ವಿಚಾರದಲ್ಲಿ ರಾಹುಲ್ ಗಾಂಧಿ ಸಲಹೆ ಪಡೆದಿದ್ದೇನೆ. ಆದರೆ ಈ ವೇಳೆ ಯಾವುದೇ ನಾಯಕರ ಬಗ್ಗೆ ವೈಯಕ್ತಿಕವಾಗಿ ಚರ್ಚೆ ಮಾಡಿಲ್ಲ ಎಂದು ತಿಳಿಸಿದರು.

ಸಿದ್ದರಾಮಯ್ಯ ಕುರಿತು ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಬಜೆಟ್ ಮಂಡನೆಗೂ ಸಂಪೂರ್ಣ ಒಪ್ಪಿಗೆ ಸಿಕ್ಕಿದೆ. ರಾಜಕೀಯವಾಗಿ ಕೆಲ ವಿಚಾರಗಳನ್ನು ಚರ್ಚೆ ಮಾಡಿದ್ದು, ಎಲ್ಲಾ ವಿಷಯಗಳನ್ನು ಮಾಧ್ಯಮದ ಮುಂದೇ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಪಡೆದರೇ ದೇಶದ ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ. ಕರ್ನಾಟದ ರೈತರ ಸಾಲಮನ್ನಾ ಮಾಡಲು ರಾಹುಲ್ ಗಾಂಧಿ ಈಗಾಗಲೇ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಪ್ರಚೋದಿತ ಹೇಳಿಕೆ ಕೊಡದಂತೆ ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಪ್ರಕರಣದ ತನಿಖೆ ನಡೆಯುತ್ತಿದೆ, ಸತ್ಯಾಂಶ ಹೊರ ಬರುವವರೆಗೂ ಸಮಧಾನ ಇರಲಿ. ಪ್ರಚೋದಿತ ಹೇಳಿಕೆ ಮೂಲಕ ಸಮಾಜದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಬಾರದು. ಶಾಂತಿ ಕದಡಿದರೆ ಎಂತಹ ದೊಡ್ಡ ವ್ಯಕ್ತಿಯಾದರೂ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವುದಾಗಿ ಎಚ್ಚರಿಕೆ ನೀಡಿದರು.

https://www.facebook.com/CMofKarnataka/photos/a.720456501336150.1073741828.708459142535886/1712343435480780/?type=3&theater

Comments

Leave a Reply

Your email address will not be published. Required fields are marked *