ಮಕ್ಕಳಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ವೃದ್ಧ ದಂಪತಿ

ಕೋಲಾರ: ಜೀವನದಲ್ಲಿ ಜಿಗುಪ್ಸೆಗೊಂಡ ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆ ಕೆಜಿಎಫ್ ನಗರದ ಅಬುಬಜಾರ್ ಕಾಲೊನಿಯಲ್ಲಿ ನಡೆದಿದೆ.

ಭಾರತ್ ಗೋಲ್ಡ್ ಮೈನಿಂಗ್ ಲಿಮಿಟೆಡ್ (ಬಿಜಿಎಂಎಲ್)ನ ನಿವೃತ್ತ ನೌಕರರಾಗಿದ್ದ ಧನರಾಜ್ (62) ಹಾಗೂ ಅವರ ಪತ್ನಿ ಪರಿಮಳದೇವಿ (60) ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ.

ತಮಗೆ ಮಕ್ಕಳಿಲ್ಲ ಎನ್ನುವ ಕಾರಣಕ್ಕಾಗಿ ಜೀವನದಲ್ಲಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಾರಿಕುಪ್ಪಂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *