ಅಣ್ಣನಿಗೆ ಏನಾದ್ರೂ ಆದ್ರೆ ಬಳ್ಳಾರಿಯಲ್ಲಿ ರುದ್ರಾವತಾರ ನೋಡುತ್ತೀರಿ- ಆನಂದ್ ಸಿಂಗ್ ಬೆಂಬಲಿಗರಿಂದ ಪೋಸ್ಟ್

ಬಳ್ಳಾರಿ: ಅಣ್ಣನಿಗೆ ಏನಾದ್ರೂ ಆದರೆ ನಾವು ಸುಮ್ಮನಿರಲ್ಲ. ಬಳ್ಳಾರಿಯಲ್ಲಿ ರುದ್ರಾವತಾರ ನೋಡುತ್ತೀರಿ ಅಂತ ಶಾಸಕ ಆನಂದ್ ಸಿಂಗ್ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ.

ಆನಂದ್ ಸಿಂಗ್ ಬೆಂಬಲಿಗರು, ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಗಣೇಶ್ ವಿರುದ್ಧ ಕಿಡಿಕಾರಿದ್ದಾರೆ. ತಮ್ಮ ನಾಯಕ ಮೇಲೆ ಹಲ್ಲೆಯಾಗಿರುವ ಕುರಿತು ಮಾಹಿತಿ ಪಡೆದಯುತ್ತಿದ್ದಂತೆ ಕೆಲ ಬೆಂಬಲಿಗರು ಬೆಂಗಳೂರಿಗೆ ತೆರಳಿದ್ದಾರೆ. ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ನಡುವೆಯೇ ವಾಗ್ದಾಳಿ ನಡೆದಿದ್ದು, ಶಾಸಕರ ಬೆಂಬಲಿಗರು ಪರಸ್ಪರ ಗಲಾಟೆ ಮಾಡಿಕೊಂಡರೆ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎನ್ನುವುದನ್ನು ಅರಿತ ಪೊಲೀಸರು ಹೈಲರ್ಟ್ ಆಗಿದ್ದಾರೆ. ಇದನ್ನು ಓದಿ: ಡಿಕೆಶಿಗೆ ಭಾರೀ ಮುಖಭಂಗ – ಶಾಸಕರನ್ನು ರಕ್ಷಿಸಲು ಸುಳ್ಳು ಹೇಳಿ ಭಾರೀ ಟೀಕೆಗೆ ಗುರಿಯಾದ್ರು ಡಿಕೆ ಬ್ರದರ್ಸ್!

ಯಾವುದೇ ಸಮಯದಲ್ಲಿ ಆನಂದ್ ಸಿಂಗ್ ಬೆಂಬಲಿಗರು ಶಾಸಕ ಗಣೇಶ್ ಮನೆಯ ಮೇಲೆ ದಾಳಿ ಮಾಡಬಹುದು ಎನ್ನುವ ಶಂಕೆ ವ್ಯಕ್ತಪಡಿಸಿ, ಹೊಸಪೇಟೆಯ ಮೃತ್ಯುಂಜಯ ನಗರದಲ್ಲಿರುವ ಶಾಸಕರ ಮನೆಗೆ ಬಿಗಿ ಭದ್ರತೆಯನ್ನು ಒದಗಿಸಿದ್ದಾರೆ. ಇದನ್ನು ಓದಿ: ಮೊದ್ಲು ಮದುವೆ ಬಳಿಕ ಎದೆನೋವು ಈಗ ಆಕ್ಸಿಡೆಂಟ್ – ಕಡೆಗೂ ಆನಂದ್ ಸಿಂಗ್ ತಲೆಗೆ 12 ಹೊಲಿಗೆ!

ಆನಂದ್ ಸಿಂಗ್ ಅವರ ಪತ್ನಿ, ಪುತ್ರ ಹಾಗೂ ಸಹೋದರ ಶಾಸಕ ಗಣೇಶ್ ವಿರುದ್ಧ ದೂರು ನೀಡಬೇಕೇ? ಬೇಡವೇ ಈ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

https://www.youtube.com/watch?v=9xgPiNXdmxU

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *